Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:2 - ಕನ್ನಡ ಸತ್ಯವೇದವು J.V. (BSI)

2 ಇದು ಆಗಲೇಬಾರದು; ನಿನಗೆ ಮರಣವಾಗಕೂಡದು, ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ ಅಧಿಕಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವದಿಲ್ಲ; ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಾನು? ಆಗುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೋನಾತಾನನು ಅವನಿಗೆ, “ಇದು ಎಂದಿಗೂ ಆಗಲೇಬಾರದು; ನಿನಗೆ ಮರಣವಾಗಕೂಡದು. ನನ್ನ ತಂದೆ ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವುದಿಲ್ಲ; ಇಂಥ ಕಾರ್ಯವನ್ನು ನನಗೆ ಹೇಗೆ ಮರೆಮಾಡಿಯಾರು? ಇಲ್ಲ, ಇದು ನಿಜವಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೋನಾತಾನನು, “ಎಂದಿಗೂ ಇಲ್ಲ. ನನ್ನ ತಂದೆಯು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ! ನನ್ನ ತಂದೆಯು ನನಗೆ ತಿಳಿಸದೆ ಏನನ್ನೂ ಮಾಡುವುದಿಲ್ಲ. ಅದು ಬಹು ಮುಖ್ಯವಾದದ್ದೇ ಆಗಿರಲಿ ಇಲ್ಲವೆ ಮುಖ್ಯವಾಗಿಲ್ಲದ್ದೇ ಆಗಿರಲಿ, ನನ್ನ ತಂದೆಯು ನನಗೆ ತಿಳಿಸೇ ತಿಳಿಸುತ್ತಾನೆ. ನನ್ನ ತಂದೆಯು ನಿನ್ನನ್ನು ಕೊಲ್ಲಬೇಕೆಂದಿದ್ದರೆ ನಾನು ನಿನಗೆ ತಿಳಿಸುತ್ತಿರಲಿಲ್ಲವೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೋನಾತಾನನು ಅವನಿಗೆ, “ಅದು ಆಗಬಾರದು. ನೀನು ಸಾಯುವುದಿಲ್ಲ; ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ, ದೊಡ್ಡ ಕಾರ್ಯವನ್ನಾದರೂ ಮಾಡುವುದಿಲ್ಲ. ಈ ಕಾರ್ಯವನ್ನು ಯಾತಕ್ಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:2
14 ತಿಳಿವುಗಳ ಹೋಲಿಕೆ  

ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ಸೌಲನು ಬರುವದಕ್ಕೆ ಒಂದು ದಿವಸ ಮುಂದಾಗಿ ಯೆಹೋವನು ಸಮುವೇಲನಿಗೆ -


ಅವರಿಬ್ಬರೂ ಅಡವಿಗೆ ಹೋದ ಮೇಲೆ ಯೋನಾತಾನನು ದಾವೀದನಿಗೆ - ಇಸ್ರಾಯೇಲ್‍ದೇವರಾದ ಯೆಹೋವನೇ ಸಾಕ್ಷಿ; ನಾನು ನಾಳೆ ಇಲ್ಲವೆ ನಾಡದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ ನಿನ್ನ ಮೇಲೆ ಅವನಿಗೆ ದಯವುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು.


ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.


ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸುವದಕ್ಕೋಸ್ಕರ ಬೇರೊಂದು ವೇದಿಯನ್ನು ಕಟ್ಟಿ ಯೆಹೋವನಿಗೆ ವಿಮುಖರಾಗಿ ದ್ರೋಹಿಗಳಾಗುವದು ನಮಗೆ ದೂರವಾಗಿರಲಿ ಅಂದರು.


ಅವರು ಅವನಿಗೆ - ನಮ್ಮ ಸ್ವಾವಿುಯು ಇಂಥಾ ಮಾತುಗಳನ್ನು ಹೇಳುವದೇನು! ನಿನ್ನ ಸೇವಕರು ಇಂಥ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.


ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ; ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ಯಜ್ಞನೈವೇದ್ಯಗಳು ನಿನಗೆ ಇಷ್ಟವಲ್ಲ; ಸರ್ವಾಂಗಹೋಮಗಳನ್ನಾಗಲಿ ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.


ಅದಕ್ಕೆ ಜನರು - ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವದು ನಮಗೆ ದೂರವಾಗಿರಲಿ;


ದಾವೀದನು ರಾಮದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ - ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ; ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವದು ಅನ್ನಲು ಯೋನಾತಾನನು ಅವನಿಗೆ -


ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು.


ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು; ಆಣೆಯಿಡುವದನ್ನು ಕೇಳಿದರೂ ಸುಮ್ಮನಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು