Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:7 - ಕನ್ನಡ ಸತ್ಯವೇದವು J.V. (BSI)

7 ಅದೇ ದಿವಸ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ತಡೆಯಲ್ಪಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ಉಳಿದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೌಲನ ಅಧಿಕಾರಿಗಳಲ್ಲಿ ಒಬ್ಬನು ಆ ದಿನ ಅಲ್ಲಿದ್ದನು. ಅವನು ದೋಯೇಗನೆಂಬ ಎದೋಮ್ಯನು. ದೋಯೇಗನನ್ನು ಯೆಹೋವನ ಸನ್ನಿಧಿಯಲ್ಲಿ ಇಟ್ಟಿದ್ದರು. ಸೌಲನ ಕುರಿಗಳನ್ನು ಕಾಯುವವರಿಗೆ ದೋಯೇಗನು ನಾಯಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:7
21 ತಿಳಿವುಗಳ ಹೋಲಿಕೆ  

ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು - ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.


ಶಾರೋನಿನಲ್ಲಿ ಮೇಯುವ ದನಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟ್,


ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ.


ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಅವನಿಗೆ ಇಳಕಲಿನ ಪ್ರದೇಶದಲ್ಲಿಯೂ ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳಿದ್ದದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದದರಿಂದ ಗುಡ್ಡ, ಫಲವತ್ತಾದ ಬೈಲು ಇವುಗಳಲ್ಲಿ ಹೊಲ ದ್ರಾಕ್ಷೇತೋಟಗಳ ಕೆಲಸಮಾಡುವವರನ್ನು ನೇವಿುಸಿದನು.


ಸೌಲನು ಇಸ್ರಾಯೇಲ್ಯರ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು - ಜನರು ಗೋಳಾಡುವದಕ್ಕೇನು ಕಾರಣವೆಂದು ಕೇಳಲು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.


ಗೆರಾರಿನ ದನಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.


ದಾವೀದನು ಅಹೀಮೆಲೆಕನನ್ನು - ಅರಸನ ಕಾರ್ಯವು ಅವಸರವಾಗಿದ್ದದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ; ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ ಎಂದು ಕೇಳಲು ಅವನು -


ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನಸಿಕೊಂಡೆನು. ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ!


ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್ ಇವರೇ.


ಯಾಜಕನಲ್ಲದ ಇತರನು ನೈವೇದ್ಯ ಪದಾರ್ಥವನ್ನು ಊಟಮಾಡಕೂಡದು. ಯಾಜಕನ ಬಳಿಯಲ್ಲಿ ಇಳುಕೊಂಡವನಾಗಲಿ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.


ಯಾಜಕನ ಮಗಳು ವಿಧವೆಯಾಗಿಯಾಗಲಿ ಗಂಡನಿಂದ ಬಿಡಲ್ಪಟ್ಟವಳಾಗಿಯಾಗಲಿ ಮಕ್ಕಳಿಲ್ಲದ ಪಕ್ಷಕ್ಕೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ತಿರಿಗಿ ತಂದೆಯ ಮನೆ ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಉಣ್ಣಲೇಬಾರದು.


ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.


ಯಾಜಕನು ಯಾವಾಗಲೂ ಪ್ರತಿ ಸಬ್ಬತ್‍ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲ್ಯರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.


ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು