Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:16 - ಕನ್ನಡ ಸತ್ಯವೇದವು J.V. (BSI)

16 ಆಗ ಅರಸನು ಅವನಿಗೆ - ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು ಎಂದು ಹೇಳಿ ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅರಸನು ಅವನಿಗೆ, “ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು” ಎಂದು ಹೇಳಿ ತನ್ನ ಬಳಿಯಲ್ಲಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಅರಸನು ಅವನಿಗೆ, “ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ರಾಜನು, “ಅಹೀಮೆಲೆಕನೇ, ನೀನು ಮತ್ತು ನಿನ್ನ ಬಂಧುಗಳೆಲ್ಲರೂ ಸಾಯಲೇಬೇಕು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಅರಸನು, “ಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯ ಸಮಸ್ತರೂ ನಿಶ್ಚಯವಾಗಿ ಸಾಯಲೇಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:16
14 ತಿಳಿವುಗಳ ಹೋಲಿಕೆ  

ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.


ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಇದನ್ನು ಕೇಳಿ ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.


ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ - ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ಚೂರುಚೂರಾಗಿ ಕಡಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಸಿಬಿಡುವೆನು;


ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವದು ಸಾಲದೆಂದೆಣಿಸಿ ಇವನು ಯೆಹೂದಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಗಳನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.


ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು.


(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ; ಆದದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು ಅಂದನು.


ಅದಕ್ಕೆ ಸೌಲನು - ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಅನ್ನಲು ಜನರು ಅವನಿಗೆ -


ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.


ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ; ಅರಸನು ತನ್ನ ಸೇವಕನ ಮೇಲೆಯೂ ಅವನ ಮನೆಯವರ ಮೇಲೆಯೂ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ ಎಂದು ಉತ್ತರಕೊಟ್ಟನು.


ನೀವು ತಿರುಗಿಕೊಂಡು ಯೆಹೋವನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ ಎಂದು ಹೇಳಿ ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯೆಹೋವನ ಯಾಜಕರ ಮೇಲೆ ಕೈಹಾಕುವದಕ್ಕೆ ಮನಸ್ಸುಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು