Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:16 - ಕನ್ನಡ ಸತ್ಯವೇದವು J.V. (BSI)

16 ದಾವೀದನ ಮಾತುಗಳು ಮುಗಿದನಂತರ ಸೌಲನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಅಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾವೀದನ ಮಾತುಗಳು ಮುಗಿದ ನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಅಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಾವೀದನು ಈ ಮಾತುಗಳನ್ನು ಹೇಳಿದಾಗ ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ನಂತರ ಸೌಲನು ಅಳಲಾರಂಭಿಸಿದನು. ಸೌಲನು ಬಹಳ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಾವೀದನ ಮಾತುಗಳು ಮುಗಿದ ನಂತರ, ಸೌಲನು ದಾವೀದನಿಗೆ, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:16
13 ತಿಳಿವುಗಳ ಹೋಲಿಕೆ  

ಸೌಲನು ದಾವೀದನ ಸ್ವರದ ಗುರುತು ಹಿಡಿದು ಅವನನ್ನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಎಂದು ಕೇಳಲು ಅವನು - ಅರಸನೇ, ನನ್ನ ಒಡೆಯನೇ, ಹೌದು ನನ್ನ ಸ್ವರವೇ;


ಅವನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವದು; ಬಿರುನುಡಿಯು ಸಿಟ್ಟನ್ನೇರಿಸುವದು.


ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ, ಆದರೆ ನಿಮ್ಮ ಖಂಡನೆಯು ಖಂಡಿಸುವದೇನು?


ಆದರೆ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಕಣ್ಣೀರು ಸುರಿಸಿದರು.


ಸಮಯೋಚಿತವಾದ ಮಾತುಗಳು ಬೆಳ್ಳಿಯ ನಕಾಸಿಯಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು.


ಆಗ ಸಾರಯಳು ಅಬ್ರಾಮನಿಗೆ - ನನ್ನ ಗೋಳು ನಿನಗೆ ತಗಲಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಾಳೆ; ನಿನಗೂ ನನಗೂ ಯೆಹೋವನೇ ನ್ಯಾಯತೀರಿಸಲಿ ಎಂದು ಹೇಳಲು ಅಬ್ರಾಮನು -


ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲ್ಯರಿಗೂ ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ ಎಂದು ಹೇಳಿಸಿದನು.


ನಾನು ಈಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದೆಣಿಸಿದಂತೆ ಯೆಹೋವನು ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ ಎಂದನು.


ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.


ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡಿಸು; ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು