Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:13 - ಕನ್ನಡ ಸತ್ಯವೇದವು J.V. (BSI)

13 ಅವನು ತನ್ನ ಜನರಿಗೆ - ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ದಾವೀದನು ತನ್ನ ಜನರಿಗೆ, “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿ,” ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರುಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರುಮಂದಿ ಸಾಮಾಗ್ರಿಗಳನ್ನು ಕಾಯುತ್ತಾ ಅಲ್ಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ದಾವೀದನು ತನ್ನ ಜನರಿಗೆ, “ನಿಮ್ಮ ಆಯುಧಗಳನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ!” ಎಂದು ಹೇಳಿದನು. ದಾವೀದನು ಮತ್ತು ಅವನ ಜನರು ಆಯುಧಗಳನ್ನು ಕಟ್ಟಿಕೊಂಡರು. ದಾವೀದನ ಸಂಗಡ ಸುಮಾರು ನಾನೂರು ಜನರು ಹೋದರು; ಇನ್ನೂರು ಜನರು ಸರಕುಗಳ ಬಳಿಯಲ್ಲಿ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:13
17 ತಿಳಿವುಗಳ ಹೋಲಿಕೆ  

ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ; ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ!


ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ; [ಪರರ] ದೋಷವನ್ನು ಲಕ್ಷಿಸದಿರುವದು ಅವನಿಗೆ ಭೂಷಣ.


ತಿಳುವಳಿಕೆಯಿಲ್ಲದೆ ಕೋರುವದು ಅಯುಕ್ತ; ದುಡುಕುವ ಕಾಲು ದಾರಿ ತಪ್ಪುವದು.


ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ಇದಲ್ಲದೆ ಕುಗ್ಗಿದವರೂ ಸಾಲಗಾರರೂ ಮನನೊಂದವರೂ ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.


ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ


ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.


ದಾವೀದನ ಎಲ್ಲಾ ಸೇವಕರೂ ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳೂ ಗತ್ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರೂ ಅರಸನ ಮುಂದೆ ಹೋದರು.


ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನುದ್ಧರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು