Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:16 - ಕನ್ನಡ ಸತ್ಯವೇದವು J.V. (BSI)

16 ನೀನು ಹೀಗೆ ಮಾಡುವದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನು ಹೀಗೆ ಮಾಡುವುದು ಸರಿಯಲ್ಲ. ಸರ್ವೇಶ್ವರನಾಣೆ, ಅವರ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೆಂಬುದೇನೋ ನಿಜ. ಅರಸನ ತಲೆಯ ಬಳಿಯಲ್ಲಿದ್ದ ಭರ್ಜಿ, ತಂಬಿಗೆ ಏನಾದವೋ, ನೋಡು,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀನು ದೊಡ್ಡ ತಪ್ಪನ್ನು ಮಾಡಿದೆ! ಯೆಹೋವನಾಣೆ, ನೀನು ಮತ್ತು ನಿನ್ನ ಜನರು ಸಾಯಲೇಬೇಕಾಗಿತ್ತು. ಏಕೆನ್ನುವಿಯೊ? ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾದ ನಿನ್ನ ಒಡೆಯನನ್ನು ನೀನು ರಕ್ಷಿಸಲಾಗಲಿಲ್ಲ. ಸೌಲನ ತಲೆಯ ಹತ್ತಿರವಿದ್ದ ಭರ್ಜಿ ಮತ್ತು ನೀರಿನ ತಂಬಿಗೆಯನ್ನು ಹುಡುಕಿರಿ, ಅವು ಎಲ್ಲಿಗೆ ಹೋದವು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ಮಾಡಿದ ಈ ಕಾರ್ಯ ಒಳ್ಳೆಯದಲ್ಲ. ಯೆಹೋವ ದೇವರ ಜೀವದಾಣೆ, ಯೆಹೋವ ದೇವರ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದ್ದರಿಂದ, ನೀವು ಮರಣಕ್ಕೆ ಯೋಗ್ಯರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ, ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:16
11 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ಸೆರೆಯವರ ಗೋಳಾಟವನ್ನು ಲಕ್ಷಿಸಿ ಮರಣಪಾತ್ರರನ್ನು ಬಿಡಿಸಿ


ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವದಕ್ಕೆ ನಾನೇನು ಯೋಗ್ಯನೋ ಎಂದು ಉತ್ತರಕೊಟ್ಟನು.


ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ - ಯೆಹೋವನಾಣೆ, ಆ ಮನುಷ್ಯನು ಸಾಯಲೇ ಬೇಕು.


ತನ್ನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ ಎಂದು ಹೇಳಿ


ಆದರೆ ದಾವೀದನು - ಅವನನ್ನು ಕೊಲ್ಲಬೇಡ; ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಎಣಿಸಲ್ಪಡುವನೋ ಅಂದನು.


ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ; ಆದದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು ಅಂದನು.


ಅವನು ತನ್ನ ಜನರಿಗೆ - ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ಒಡೆಯನೂ ಆಗಿದ್ದಾನೆ; ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿಮಾಡಲಿ ಎಂದು ಹೇಳಿದನು.


ದಾವೀದನು ಅಬ್ನೇರನಿಗೆ - ನೀನು ಶೂರನಲ್ಲವೋ? ಇಸ್ರಾಯೇಲ್ಯರಲ್ಲಿ ನಿನಗೆ ಸಮಾನರಾರು! ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ? ಜನರಲ್ಲೊಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.


ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ - ನೀನು ಅಣತೋತಿನಲ್ಲಿರುವ ನಿನ್ನ ಸ್ವಾಸ್ತ್ಯಕ್ಕೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು