Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:20 - ಕನ್ನಡ ಸತ್ಯವೇದವು J.V. (BSI)

20 ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯ ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲ್ಯರ ಅರಸನು ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಲು ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲರ ಅರಸನು ಹೊರಟು ಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರನ ಸಾನ್ನಿಧ್ಯವಿಲ್ಲದಿರುವ ಈ ದೇಶದಲ್ಲಿ ನಾನು ರಕ್ತ ಚೆಲ್ಲಿ ಸಾಯುವಂಥಾಗದಿರಲಿ. ಅಕಟಾ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಹೊರಟ ಬೇಟೆಗಾರನೋ ಎಂಬಂತೆ ಇಸ್ರಯೇಲರ ಅರಸ ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾರಲ್ಲಾ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನ ಸನ್ನಿಧಿಯಿಂದ ದೂರದಲ್ಲಿರುವ ಈ ಸ್ಥಳದಲ್ಲಿ ನನ್ನನ್ನು ಸಾಯಿಸಬೇಡಿ. ಇಸ್ರೇಲರ ರಾಜನು ಒಂದು ಸಣ್ಣ ಹುಳಕ್ಕಾಗಿ ಹುಡುಕುತ್ತಾ ಹೊರ ಬಂದಿದ್ದಾನೆ. ಕೌಜುಗ ಹಕ್ಕಿಯನ್ನು ಬೆಟ್ಟಗಳಲ್ಲಿ ಬೇಟೆಯಾಡುವ ಬೇಟೆಗಾರನಂತೆ ನೀನಿರುವೆಯಲ್ಲಾ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಯೆಹೋವ ದೇವರ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ, ಇಸ್ರಾಯೇಲಿನ ಅರಸನು ಒಂದು ನೊಣವನ್ನು ಹುಡುಕಲು ಹೊರಟನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:20
9 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಅರಸೇ, ಯಾರನ್ನು ಹಿಂದಟ್ಟ ಹೊರಟಿದ್ದೀ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೇ, ಒಂದು ಬಡ ಸೊಳ್ಳೆಯನ್ನೇ.


ಅದೇ ಗಳಿಗೆಯಲ್ಲಿ ಯೇಸು ಗುಂಪುಗುಂಪಾಗಿ ಕೂಡಿದ್ದ ಜನರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ನಾನು ದಿನಾಲು ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;


ಆತನು ಇನ್ನೂ ಮಾತಾಡುತ್ತಿರಲು ಇಗೋ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು; ಮಹಾಯಾಜಕರು ಜನರ ಹಿರಿಯರು ಇವರ ಕಡೆಯಿಂದ ಬಹು ಜನರ ಗುಂಪು ಕತ್ತಿ ದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು.


ಯಾವನಾದರೂ ನನ್ನ ಸ್ವಾವಿುಯಾದ ನಿನ್ನನ್ನು ಹಿಂಸಿಸಿ ಜೀವತಗೆಯಬೇಕೆಂದಿರುವಾಗ ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಭದ್ರವಾಗಿರಲಿ; ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ನನ್ನ ತಂದೆಯೇ, ಇಗೋ ನೋಡು; ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ; ನಾನು ನಿನ್ನನ್ನು ಕೊಲ್ಲದೆ ನಿನ್ನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವಿಯಲ್ಲಾ;


ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಜನರನ್ನು ಹಿಡಿಯುವದಕ್ಕೆ ಬಹುಮಂದಿ ಬೆಸ್ತರನ್ನು ಕರೆಯಿಸುವೆನು; ಆಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ ಬೇಟೆಯಾಡುವದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ನಿಷ್ಕಾರಣವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.


ಯೆಹೋವನು ನ್ಯಾಯಾಧಿಪತಿಯಾಗಿ ನವ್ಮಿುಬ್ಬರ ವ್ಯಾಜ್ಯವನ್ನು ತೀರಿಸಲಿ; ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಗೆ ತಪ್ಪಿಸಲಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು