Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:10 - ಕನ್ನಡ ಸತ್ಯವೇದವು J.V. (BSI)

10 ಆಕೀಷನು ಅವನನ್ನು - ಈಹೊತ್ತು ಯಾವ ಪ್ರಾಂತದವರನ್ನು ಸೂರೆಮಾಡಿಕೊಂಡು ಬಂದಿರಿ ಎಂದು ಕೇಳುವನು. ದಾವೀದನು ಅವನಿಗೆ - ದಕ್ಷಿಣಪ್ರಾಂತದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:10
21 ತಿಳಿವುಗಳ ಹೋಲಿಕೆ  

ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.


ಹೆಚ್ರೋನನ ಚೊಚ್ಚಲಮಗನಾದ ಯೆರಹ್ಮೇಲನ ಮಕ್ಕಳು - ರಾಮನು ಚೊಚ್ಚಲನು; ಬೂನ, ಓರೆನ್, ಓಚೆಮ್, ಅಹೀಯ ಎಂಬವರು ಅನಂತರ ಹುಟ್ಟಿದವರು.


ಹೆಚ್ರೋನನ ಸಂತಾನದವರು - ಅವನಿಂದ ಯೆರಹ್ಮೇಲ್, ರಾಮ್, ಕೆಲೂಬಾಯ್ ಎಂಬವರು ಹುಟ್ಟಿದರು.


ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,


(ಕೇನ್ಯನಾದ ಹೆಬೆರನು ಮೋಶೆಯ ಮಾವನಾದ ಹೋಬಾಬನ ವಂಶದ ಉಳಿದ ಕೇನ್ಯರನ್ನು ಅಗಲಿ ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರಹಾಕಿಕೊಂಡಿದ್ದನು.)


ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ವಿುಥ್ಯವಾದದ್ದನ್ನು ಹಗೆಮಾಡುತ್ತೇನೆ, ಅದು ನನಗೆ ಅಸಹ್ಯವಾಗಿದೆ; ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.


ವಿುಥ್ಯಾಮಾರ್ಗವನ್ನು ನನಗೆ ದೂರಮಾಡು; ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.


ಅಬ್ಷಾಲೋಮನ ಸೇವಕರು ಸ್ತ್ರೀಯ ಮನೆಗೆ ಹೋಗಿ - ಅಹೀಮಾಚ್ ಯೋನಾತಾನರೆಲ್ಲಿ ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು - ಅವರು ಹಳ್ಳದಾಟಿ ಹೋಗಿ ಬಿಟ್ಟರು ಎಂದು ಉತ್ತರ ಕೊಟ್ಟಳು. ಅವರು ಅವರನ್ನು ಹುಡುಕುವದಕ್ಕೆ ಹೋಗಿ ಕಾಣದೆ ಯೆರೂಸಲೇವಿುಗೆ ಹಿಂದಿರುಗಿದರು.


ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ - ಬೇಗ ಬಾ; ಫಿಲಿಷ್ಟಿಯರು ದೇಶದೊಳಕ್ಕೆ ನುಗ್ಗಿದ್ದಾರೆ ಎಂದು ತಿಳಿಸಿದ್ದರಿಂದ


ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟುಮಾಡಿ ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.


ಆದರೆ ಅವನು ಕೇನ್ಯರಿಗೆ - ನೀವು ಅಮಾಲೇಕ್ಯರನ್ನು ಬಿಟ್ಟು ಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೇ ಆಶೀರ್ವಾದವು; ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಗೇ ಆಶೀರ್ವಾದವು.


ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ನುಡಿದದ್ದೇನಂದರೆ - ನಿಮ್ಮ ನಿವಾಸಸ್ಥಳವು ಶಾಶ್ವತವಾಗಿಯೇ ತೋರುತ್ತದೆ; ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.


ಅವನು - ನೀನು ನಿಜವಾಗಿ ನನ್ನ ಮಗನಾದ ಏಸಾವನೋ ಎಂದು ಕೇಳಿದ್ದಕ್ಕೆ ಯಾಕೋಬನು - ಹೌದು ಅನ್ನಲು


ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.


ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ ಅವನ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು