Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:7 - ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಅವನು ತನ್ನ ಸೇವಕರಿಗೆ - ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು ಎಂದು ಹೇಳಲಾಗಿ ಅವರು - ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಅವನು ತನ್ನ ಸೇವಕರಿಗೆ, “ಭೂತಪ್ರೇತಗಳಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಬಳಿಗೇ ಹೋಗಿ ವಿಚಾರಿಸುವೆನು,” ಎಂದು ಹೇಳಿದನು. ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಸೌಲನು ತನ್ನ ದಾಸರಿಗೆ, “ನಾನು ವಿಚಾರಿಸುವಂತೆ ಮಾಂತ್ರಿಕಳಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ,” ಎಂದನು. ಅವನ ದಾಸರು ಅವನಿಗೆ, “ಇಗೋ, ಎಂದೋರಿನಲ್ಲಿ ಮಾಂತ್ರಿಕಳಾದ ಒಬ್ಬ ಸ್ತ್ರೀ ಇದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:7
13 ತಿಳಿವುಗಳ ಹೋಲಿಕೆ  

ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.


ಅವರು ಎಂದೋರಿನಲ್ಲಿ ವಧಿಸಲ್ಪಟ್ಟು ಹೊಲದ ಗೊಬ್ಬರವಾಗಿಹೋದರಲ್ಲಾ.


ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತಗಳಲ್ಲಿ ಬೇತ್‍ಷೆಯಾನ್, ಇಬ್ಲೆಯಾಮ್, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.


ಐಗುಪ್ತದ ಅಂತರಾತ್ಮವು ಬರಿದಾಗುವದು; ಅದರ ಆಲೋಚನೆಯನ್ನು ಭಂಗಪಡಿಸುವೆನು; ಅಲ್ಲಿಯವರು ವಿಗ್ರಹಗಳನ್ನೂ ಮಂತ್ರಗಾರರನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸುವರು.


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು.


ಸಮುವೇಲನು ಮೃತಿಹೊಂದಿದ್ದನು. ಇಸ್ರಾಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟಿದ್ದನು.


ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು