Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:14 - ಕನ್ನಡ ಸತ್ಯವೇದವು J.V. (BSI)

14 ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ನೈವೇದ್ಯಗಳಿಂದಲೂ ಎಂದಿಗೂ ಪ್ರಾಯಶ್ಚಿತ್ತವಾಗುವದಿಲ್ಲವೆಂಬದಾಗಿ ಆಣೆಯಿಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಏಲಿಯ ಮನೆಯವರ ಅಪರಾಧವು ಎಂದಿಗೂ ಬಲಿಯಿಂದಾಗಲಿ ನೈವೇದ್ಯಗಳಿಂದಾಗಲಿ ಪರಿಹಾರವಾಗುವುದಿಲ್ಲವೆಂದು ಪ್ರಮಾಣಮಾಡಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲಿ ಧಾನ್ಯನೈವೇದ್ಯವಾಗಲಿ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ‘ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿಯಿಂದಲಾದರೂ, ಅರ್ಪಣೆಯಿಂದಲಾದರೂ ಪ್ರಾಯಶ್ಚಿತ್ತವಾಗುವದಿಲ್ಲ, ಎಂದು ನಾನು ಏಲಿಯ ಮನೆಯನ್ನು ಕುರಿತು ಪ್ರಮಾಣಮಾಡಿದೆನು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:14
10 ತಿಳಿವುಗಳ ಹೋಲಿಕೆ  

ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗೆ ಗೋಚರಪಡಿಸಿದ್ದೇನಂದರೆ - ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ ಎಂಬದೇ.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂಬೇಡ, ನಾನು ಕೇಳಲೊಲ್ಲೆ.


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸೇನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.


ಇಸ್ರಾಯೇಲ್ಯರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.


ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು