Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:17 - ಕನ್ನಡ ಸತ್ಯವೇದವು J.V. (BSI)

17 ಆಗ ಏಲಿಯು ಅವನಿಗೆ - ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಬೇಡ; ಮುಚ್ಚಿದರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಏಲಿ ಅವನಿಗೆ, “ಸರ್ವೇಶ್ವರ ನಿನಗೆ ತಿಳಿಸಿದ್ದೇನು? ಅವರ ಮಾತುಗಳಲ್ಲಿ ಒಂದನ್ನಾದರೂ ಮರೆಮಾಡಬೇಡ; ಮಾಡಿದೆಯಾದರೆ ಸರ್ವೇಶ್ವರ ಇಷ್ಟಬಂದ ಹಾಗೆ ನಿನ್ನನ್ನು ದಂಡಿಸಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಏಲಿಯು, “ಯೆಹೋವನು ನಿನಗೆ ಹೇಳಿದ್ದೇನು? ನನ್ನೊಂದಿಗೆ ಅದನ್ನು ಮುಚ್ಚಿಡಬೇಡ. ಆತನು ನಿನ್ನೊಂದಿಗೆ ಆಡಿದ ಮಾತುಗಳಲ್ಲಿ ಏನನ್ನಾದರೂ ಮುಚ್ಚಿಟ್ಟರೆ ಆತನು ನಿನ್ನನ್ನು ಶಿಕ್ಷಿಸುತ್ತಾನೆ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಲಿಯು ಅವನಿಗೆ, “ಅವರು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಅವರು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವುದನ್ನಾದರೂ ನನಗೆ ಮರೆಮಾಡಿದರೆ, ದೇವರು ನಿನ್ನನ್ನು ದಂಡಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:17
18 ತಿಳಿವುಗಳ ಹೋಲಿಕೆ  

ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು - ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ ಎಂದು ಆಣೆಯಿಟ್ಟು ಹೇಳಿದನು.


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂದಳು.


ಆಗ ಮಹಾಯಾಜಕನು - ನಿನಗೆ ಜೀವಸ್ವರೂಪನಾದ ದೇವರ ಆಣೆಯನ್ನು ಇಡುತ್ತೇನೆ; ನೀನು ದೇವಕುಮಾರನಾದ ಕ್ರಿಸ್ತನು ಹೌದೋ ಅಲ್ಲವೋ ಎಂಬದನ್ನು ನಮಗೆ ಹೇಳಬೇಕು ಎಂದು ಅನ್ನಲಾಗಿ ಯೇಸು -


ಯಾಕೋಬ್ ವಂಶವೇ, ಯೆಹೋವನ ಸ್ವಭಾವವು ಹಿಡಿತವಾದದ್ದೋ, ಇಂಥ ಕೃತ್ಯಗಳು ಆತನವೋ ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೇ ಹಿತಕರವಷ್ಟೆ.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಆಗ ಅರಸನು ಅವನಿಗೆ - ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣಮಾಡಿಸಬೇಕು ಅನ್ನಲು ಅವನು -


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ನನ್ನ ತಂದೆಯು ನಿನಗೆ ಕೇಡುಮಾಡ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ. ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.


ಆದರೆ ಏಲಿಯು - ನನ್ನ ಮಗನೇ, ಸಮುವೇಲನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ ಎಂದು ಪ್ರತಿಜ್ಞೆಮಾಡಿದ್ದನು.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರತರಿಸಿ - ನಾನು ನಿನ್ನನ್ನು ಒಂದು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ ಎನ್ನಲು


ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ - ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಮುಚ್ಚದೆ ನಿಮಗೆ ತಿಳಿಸುವೆನು ಎಂದು ಹೇಳಲು


ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ಪೀಠದ ಹತ್ತಿರ ನಿಂತಿದ್ದನು; ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು.


ಅದಕ್ಕೆ ಸೌಲನು - ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಅನ್ನಲು ಜನರು ಅವನಿಗೆ -


ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲಾ ಇಸ್ರಾಯೇಲ್ಯರಲ್ಲಿಯೂ ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ


ಆಗ ಅರಸನು ಆ ಸ್ತ್ರೀಗೆ - ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ; ನೀನು ಅದನ್ನು ಮರೆಮಾಡದೆ ತಿಳಿಸಬೇಕು ಎಂದು ಹೇಳಲು ಆಕೆಯು - ಅರಸನ ಅಪ್ಪಣೆಯಾಗಲಿ ಎಂದು ಉತ್ತರಕೊಟ್ಟಳು.


ಇದಲ್ಲದೆ ಅವನು - ನಾನು ಈಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಎಂದು ಆಣೆಯಿಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು