Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:14 - ಕನ್ನಡ ಸತ್ಯವೇದವು J.V. (BSI)

14 ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣಪ್ರಾಂತವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:14
14 ತಿಳಿವುಗಳ ಹೋಲಿಕೆ  

ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ಕೆರೇತ್ಯ ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರ ಕತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು.


ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಯೆಹೂದ ಪ್ರಾಂತಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿವಿುತ್ತವಾಗಿ ಸಂತೋಷಿಸಿ ಉಂಡು ಕುಡಿದು ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ


ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ಪಟ್ಟಣವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.


ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ಆದರೆ ಇದರ ಹೊಲಗಳನ್ನೂ ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.


ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹುಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು; ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಧನವಂತನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.


ಆಗ ದಾವೀದನು ಅವನನ್ನು - ನೀನು ಯಾರ ಕಡೆಯವನು? ಎಲ್ಲಿಯವನು ಎಂದು ಕೇಳಲು ಅವನು - ನಾನು ಐಗುಪ್ತ್ಯನು; ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.


ಅನಂತರ ದಾವೀದನು - ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರಕೊಂಡು ಹೋಗುವಿಯೋ ಎಂದು ಕೇಳಿದ್ದಕ್ಕೆ ಅವನು - ನೀನು ನನ್ನನ್ನು ಕೊಲ್ಲುವದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು