Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:21 - ಕನ್ನಡ ಸತ್ಯವೇದವು J.V. (BSI)

21 ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಇಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಬಂದರು. ದಾವೀದನು ಅವರನ್ನು ಸಂಧಿಸಿ ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋದನು. ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಲು ಆ ಜನರು ಬಂದರು. ದಾವೀದನು ಅವರನ್ನು ಸಂಧಿಸಿ ಕ್ಷೇಮಸಮಾಚಾರವನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದಾವೀದನು ತನ್ನ ಇನ್ನೂರು ಮಂದಿ ಉಳಿದುಕೊಂಡಿದ್ದ ಬೆಸೋರ್ ಹಳ್ಳಕ್ಕೆ ಬಂದನು. ತಮ್ಮ ಅತಿಯಾದ ಆಯಾಸದಿಂದಲೂ ಬಲಹೀನತೆಯಿಂದಲೂ ದಾವೀದನನ್ನು ಹಿಂಬಾಲಿಸಲಾಗದ ಜನರೇ ಇವರು. ದಾವೀದನನ್ನು ಮತ್ತು ಅವನೊಡನೆ ಹೋಗಿದ್ದ ಸೈನಿಕರನ್ನು ಸಂಧಿಸಲು ಇವರು ಹೊರಗೆ ಬಂದರು. ದಾವೀದ ಮತ್ತು ಅವನ ಸೈನ್ಯವು ಸಮೀಪಿಸಿದಾಗ, ಬೆಸೋರ್ ಹಳ್ಳದಲ್ಲಿದ್ದ ಜನರು ಅವರನ್ನು ವಂದಿಸಿದರು. ದಾವೀದನು ಸಹ ಅವರನ್ನು ಸಂಧಿಸಿ ಅವರ ಯೋಗಕ್ಷೇಮವನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:21
7 ತಿಳಿವುಗಳ ಹೋಲಿಕೆ  

ಸಹೋದರ ಸ್ನೇಹವು ನೆಲೆಯಾಗಿರಲಿ.


ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.


ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ - ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ ಎಂದು ನನ್ನನ್ನು ನಿಂದಿಸಿದಿರಲ್ಲಾ;


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರರ ಸುಖದುಃಖಗಳಲ್ಲಿ ಸೇರುವವರಾಗಿರಿ; ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ಕರುಣೆಯೂ ದೀನಭಾವವೂ ಉಳ್ಳವರಾಗಿರಿ.


ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮುರ್ಖರೂ ಆದ ಕೆಲವು ಮಂದಿ - ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವದಿಲ್ಲ. ತಮ್ಮತಮ್ಮ ಹೆಂಡರುಮಕ್ಕಳನ್ನು ಕರಕೊಂಡು ಹೋಗಿಬಿಡಲಿ ಅಂದರು.


ಇದಲ್ಲದೆ ಇಲ್ಲಿ ಹತ್ತು ಗಿಣ್ಣಿನ ಗಡ್ಡೆಗಳಿರುತ್ತವೆ; ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.


ದಾವೀದನು ತಾನು ತಂದವುಗಳನ್ನು ಸಾಮಾನುಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು