Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:19 - ಕನ್ನಡ ಸತ್ಯವೇದವು J.V. (BSI)

19 ಫೀನೆಹಾಸನ ಹೆಂಡತಿಯಾದ ಅವನ ಸೊಸೆಯು ದಿನತುಂಬಿದ ಗರ್ಭಿಣಿಯಾಗಿದ್ದು ದೇವರ ಮಂಜೂಷವು ಶತ್ರುವಶವಾದದ್ದನ್ನೂ ಮಾವನೂ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಫೀನೆಹಾಸನ ಹೆಂಡತಿಯಾದ ಏಲಿಯ ಸೊಸೆ ದಿನತುಂಬಿದ ಗರ್ಭಿಣಿ. ದೇವರ ಮಂಜೂಷ ಶತ್ರುವಶವಾದದ್ದನ್ನು ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಏಲಿಯ ಸೊಸೆ ಅಂದರೆ ಫೀನೆಹಾಸನ ಹೆಂಡತಿಯು ಗರ್ಭಿಣಿಯಾಗಿದ್ದಳು. ಹೆರಿಗೆಯ ಸಮಯ ಸಮೀಪಿಸಿತ್ತು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುಗಳ ವಶವಾದದ್ದನ್ನೂ ತನ್ನ ಮಾವನಾದ ಏಲಿಯು ಸತ್ತದ್ದನ್ನೂ ಗಂಡನಾದ ಫೀನೆಹಾಸನು ಸತ್ತ ಸುದ್ದಿಯನ್ನೂ ಅವಳು ಕೇಳಿದಳು. ಈ ಸುದ್ದಿಯನ್ನು ಕೇಳಿದ ತಕ್ಷಣ ಪ್ರಸವವೇದನೆಯಾಗಿ ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಫೀನೆಹಾಸನ ಹೆಂಡತಿಯಾದ ಅವನ ಸೊಸೆಯು ಗರ್ಭಿಣಿಯಾಗಿ ಹೆರುವ ಕಾಲದಲ್ಲಿದ್ದಳು. ಅವಳು, ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರೆಂಬುದನ್ನೂ ಕೇಳಿದಾಗ, ಅವಳಿಗೆ ಪ್ರಸವವೇದನೆ ಉಂಟಾಗಿ, ಅವಳು ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:19
7 ತಿಳಿವುಗಳ ಹೋಲಿಕೆ  

ಮುದುಕನೂ ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆ ಪೀಠದಿಂದ ಹಿಂದಕ್ಕೆ ಬಾಗಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲ್ಯರನ್ನು ನಾಲ್ವತ್ತು ವರುಷ ಪಾಲಿಸಿದನು.


ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು - ಭಯಪಡಬೇಡ, ಮಗನನ್ನು ಹೆತ್ತಿದ್ದೀ ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರ ಕೊಡಲಿಲ್ಲ.


ಆಮೇಲೆ ಸ್ತ್ರೀಗೆ - ನೀನು ಗರ್ಭಿಣಿಯಾಗಿರುವ ಕಾಲದಲ್ಲಿ ಬಹು ಸಂಕಟಪಡಬೇಕೆಂದು ನಾನು ನೇವಿುಸಿದ್ದೇನೆ; ಕಷ್ಟದಿಂದಲೇ ಮಕ್ಕಳನ್ನು ಹೆರುವಿ; ಗಂಡನ ಮೇಲೆ ನಿನಗೆ ಆಶೆಯಿರುವದು; ಅವನು ನಿನಗೆ ಒಡೆಯನಾಗುವನು. ಎಂದು ಹೇಳಿದನು.


ಆಕೆ ಹೆರಿಗೆಯ ಬೇನೆಯಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ - ಅಂಜಬೇಡ; ಇನ್ನೊಂದು ಗಂಡು ಮಗುವು ಹುಟ್ಟುವದಲ್ಲಾ ಎಂದು ಹೇಳಿದಳು.


ಆ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು.


ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು