Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:4 - ಕನ್ನಡ ಸತ್ಯವೇದವು J.V. (BSI)

4 ಜನರು - ನಾವು ಪ್ರಾಯಶ್ಚಿತ್ತಾರ್ಥವಾಗಿ ಕಳುಹಿಸತಕ್ಕದ್ದೇನು ಎನ್ನಲು ಅವರು - ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ ಇಲಿಗಳನ್ನೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಜನರು, “ನಾವು ಪ್ರಾಯಶ್ಚಿತಾರ್ಥವಾಗಿ ಏನನ್ನು ಕಳುಹಿಸಬೇಕು?” ಎಂದು ವಿಚಾರಿಸಿದರು. ಅದಕ್ಕೆ ಅವರು, “ನಿಮಗೂ ನಿಮ್ಮ ರಾಜರುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ನಿಮ್ಮ ರಾಜರುಗಳ ಸಂಖ್ಯೆಗೆ ಸರಿಯಾಗಿ ಐದು ಬಂಗಾರದ ಗಡ್ಡೆಗಳನ್ನು ಹಾಗು ಐದು ಬಂಗಾರದ ಇಲಿಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅವರು, “ದೋಷಪರಿಹಾರ ಕಾಣಿಕೆಗಾಗಿ ನಾವು ಅದರ ಸಂಗಡ ಕಳುಹಿಸತಕ್ಕದ್ದೇನು?” ಎಂದರು. ಅದಕ್ಕವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವುದರಿಂದ ಫಿಲಿಷ್ಟಿಯರ ಅಧಿಪತಿಗಳ ಸಂಖ್ಯೆಗೆ ಸರಿಯಾಗಿ ಒಬ್ಬೊಬ್ಬರಿಗೆ ಬಂಗಾರದ ಐದು ಗಡ್ಡೆಗಳನ್ನು ಮತ್ತು ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:4
10 ತಿಳಿವುಗಳ ಹೋಲಿಕೆ  

ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‍ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.


ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.


ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ ಅದರ ಗ್ರಾಮಗಳಲ್ಲಿಯೂ ಗಡ್ಡೆರೋಗವನ್ನು ಬರಮಾಡಿ ಅವುಗಳನ್ನು ಹಾಳುಮಾಡಿದನು.


ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ ಇಸ್ರಾಯೇಲ್‍ದೇವರಿಗೆ ಬಹುಮಾನವಾಗಿ ಕೊಟ್ಟರೆ ಆತನ ಶಿಕ್ಷಾಹಸ್ತವು ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಪ್ರಾಂತಗಳನ್ನೂ ಬಿಟ್ಟುಹೋದೀತು.


ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.


ಇಸ್ರಾಯೇಲ್ಯರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿಬಂಗಾರದ ಒಡವೆಗಳನ್ನೂ ಬಟ್ಟೆಗಳನ್ನೂ ಕೇಳಿಕೊಂಡರು.


ಹೂಡಿ ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ.


ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ರೇಗಿದವನಾಗಿ ತನ್ನ ತಂದೆಯ ಮನೆಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು