Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:5 - ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ ಇಸ್ರಾಯೇಲ್‍ದೇವರಿಗೆ ಬಹುಮಾನವಾಗಿ ಕೊಟ್ಟರೆ ಆತನ ಶಿಕ್ಷಾಹಸ್ತವು ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಪ್ರಾಂತಗಳನ್ನೂ ಬಿಟ್ಟುಹೋದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಈ ಗಡ್ಡೆಗಳ ಹಾಗು ಇಲಿಗಳ ರೂಪವನ್ನು ಚಿನ್ನದಿಂದ ಮಾಡಿಸಿ ಇಸ್ರಯೇಲ್ ದೇವರಿಗೆ ಬಹುಮಾನವಾಗಿ ಕೊಡಿ. ಆಗ ಆತನ ಶಿಕ್ಷಾಹಸ್ತ ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಹಾಗು ಪ್ರಾಂತ್ಯಗಳನ್ನೂ ಬಿಟ್ಟುಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ನಿಮ್ಮೆಲ್ಲರ ನಾಶಕ್ಕೆ ಕಾರಣವಾದ ಈ ಗಡ್ಡೆಗಳ ಹಾಗು ಇಲಿಗಳ ಸ್ವರೂಪಗಳನ್ನು ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಅವರು ನಿಮ್ಮ ಮೇಲೆಯೂ, ನಿಮ್ಮ ದೇವರುಗಳ ಮೇಲೆಯೂ, ನಿಮ್ಮ ಭೂಮಿಯ ಮೇಲೆಯೂ ಇರುವ ತಮ್ಮ ಕೈಯನ್ನು ತೆಗೆದು ಹಗುರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:5
30 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಆಕಾನನಿಗೆ - ನನ್ನ ಮಗನೇ, ನೀನು ಇಸ್ರಾಯೇಲ್ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವದನ್ನೂ ಮುಚ್ಚಬೇಡ ಅಂದನು.


ದೇವರ ಹಸ್ತವು ಅವರಿಗೂ ಬಾಧಕವಾಗಿದ್ದದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ - ಇಸ್ರಾಯೇಲ್‍ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ ಅಂದರು.


ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು


ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು, ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ನೀರಿನಂತೆ ನನ್ನ ಶರೀರದ ಸಾರವೆಲ್ಲಾ ಬತ್ತಿಹೋಯಿತು. ಸೆಲಾ.


ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.


ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರಮಾಡಿಕೊಳ್ಳದೆ ಈ ಉಪದ್ರವಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.


ಅವನು - ನೀವೆಲ್ಲರು ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ, ಆತನು ನ್ಯಾಯತೀರ್ಪುಮಾಡುವ ಗಳಿಗೆಯು ಬಂದಿದೆ. ಭೂಲೋಕ ಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನಿಗೆ ನಮಸ್ಕಾರ ಮಾಡಿರಿ ಎಂದು ಮಹಾಶಬ್ದದಿಂದ ಹೇಳಿದನು.


ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮಂದಟ್ಟುಮಾಡಿಕೊಳ್ಳದಿದ್ದರೆ ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮಂದಟ್ಟುಮಾಡಿಕೊಳ್ಳದ ಕಾರಣ ಅವುಗಳನ್ನು ಶಪಿಸೇ ಇದ್ದೇನೆ.


ಗುಂಪುವಿುಡತೆ, ಸಣ್ಣವಿುಡತೆ, ದೊಡ್ಡವಿುಡತೆ, ಚೂರಿವಿುಡತೆ, ಅಂತು ನಾನು ನಿಮ್ಮ ಮೇಲೆ ಕಳುಹಿಸಿದ ನನ್ನ ದೊಡ್ಡ ದಂಡು ತಿಂದುಬಿಟ್ಟ ವರುಷಗಳನ್ನು ನಾನು ನಿಮಗೆ ಕಟ್ಟಿಕೊಡುವೆನು.


ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ನಿನ್ನ ದಂಡನೆಯನ್ನು ಪರಿಹರಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.


ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು.


ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ ಐಗುಪ್ತ್ಯರ ಚೊಚ್ಚಲುಮಕ್ಕಳನ್ನು ಸಂಹರಿಸಿದದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.


ಆ ರಾತ್ರಿ ನಾನು ಐಗುಪ್ತ ದೇಶದ ನಡುವೆ ಹಾದುಹೋಗಿ ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಚೊಚ್ಚಲಾಗಿರುವದನ್ನೆಲ್ಲಾ ಸಂಹರಿಸುವೆನು; ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ಶಿಕ್ಷೆಮಾಡುವೆನು; ನಾನು ಯೆಹೋವನು.


ಯೆಹೋವನು ಹಾಗೆಯೇ ಮಾಡಿದನು; ವಿಷದ ಹುಳಗಳು ಫರೋಹನ ಅರಮನೆಯಲ್ಲಿಯೂ ಅವನ ಪರಿವಾರದವರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು; ಅವುಗಳಿಂದ ದೇಶವು ಹಾಳಾಯಿತು.


ಅವರು ಹಾಗೆಯೇ ಮಾಡಿದರು; ಆರೋನನು ಕೋಲನ್ನು ಹಿಡುಕೊಂಡು ಕೈಚಾಚಿ ಭೂವಿುಯ ಧೂಳನ್ನು ಹೊಡೆಯಲು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹೇನುಗಳು ಬಂದವು; ಐಗುಪ್ತ ದೇಶದಲ್ಲೆಲ್ಲಾ ಭೂವಿುಯಲ್ಲಿರುವ ಧೂಳು ಹೇನುಗಳಾಯಿತು.


ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನೀನು ಕೋಲನ್ನು ಹಿಡಿದುಕೊಂಡು ಹೊಳೆ ಕಾಲುವೆ ಕೆರೆ ಇವುಗಳ ಮೇಲೆ ಕೈಚಾಚು; ಆಗ ಐಗುಪ್ತದೇಶದ ಮೇಲೆಲ್ಲಾ ಕಪ್ಪೆಗಳು ಬರುವವು ಎಂದು ಹೇಳಬೇಕು ಅಂದನು.


ಹೂಡಿ ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ.


ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.


ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.


ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು