Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:9 - ಕನ್ನಡ ಸತ್ಯವೇದವು J.V. (BSI)

9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರವೆಷ್ಟೆಂಬದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟು ಘನವಾದುದೆಂಬುದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ಅವರ ಮಾತನ್ನು ಕೇಳು. ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು, ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬುದನ್ನು ತಿಳಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:9
10 ತಿಳಿವುಗಳ ಹೋಲಿಕೆ  

ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ ಅದನ್ನು ಒಂದು ಪುಸ್ತಕದಲ್ಲಿ ಬರೆದು ಯೆಹೋವನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ಇದಲ್ಲದೆ ಪ್ರಭುವು ಪ್ರಜೆಗಳ ಪಿತ್ರಾರ್ಜಿತ ಭೂವಿುಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು; ಸ್ವಂತ ಭೂವಿುಯನ್ನೇ ಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳಕೊಂಡು ದಿಕ್ಕಾಪಾಲಾಗಿ ಹೋದಾನು.


ನಾನು ದುಷ್ಟನಿಗೆ - ಸತ್ತೇ ಸಾಯುವಿ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವದು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲ್ಯರಿಗೂ ಘೋರ ಯುದ್ಧವಿದ್ದದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.


ಯಜ್ಞವನ್ನರ್ಪಿಸುವದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ - ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬಂದು


ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.


ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ - ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಲಾಲಿಸಿ ನಿಮಗೊಬ್ಬ ಅರಸನನ್ನು ನೇವಿುಸಿದೆನು.


ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾರಭ್ಯ ಇಂದಿನವರೆಗೂ ನಾನು ಅವರಿಗೆ - ನನ್ನ ಮಾತನ್ನು ಕೇಳಿರಿ ಎಂದು ಸಾವಕಾಶಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು