Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:13 - ಕನ್ನಡ ಸತ್ಯವೇದವು J.V. (BSI)

13 ಅರಸನು ಮತ್ತೊಬ್ಬ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಅವನನ್ನು - ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅರಸನು ಮತ್ತೊಬ್ಬ ಪಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು, ಎಲೀಯನ ಮುಂದೆ ಮೊಣಕಾಲೂರಿ, “ದೈವಪುರುಷರೇ, ನನ್ನ ಮತ್ತು ನನ್ನ ಸೇವಕರಾದ ಈ ಐವತ್ತುಮಂದಿಯ ಪ್ರಾಣ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದ್ದಾಗಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಹಜ್ಯನು ಮೂರನೆಯ ಸೇನಾಧಿಪತಿಯನ್ನು ಐವತ್ತು ಜನರೊಂದಿಗೆ ಕಳುಹಿಸಿದನು. ಐವತ್ತು ಮಂದಿಯ ಮೂರನೆಯ ಸೇನಾಧಿಪತಿಯು ಎಲೀಯನ ಬಳಿಗೆ ಬಂದನು. ಸೇನಾಧಿಪತಿಯು ತನ್ನ ಮೊಣಕಾಲುಗಳ ಮೇಲೆ ಬಿದ್ದು ನಮಸ್ಕರಿಸಿದನು. ಸೇನಾಧಿಪತಿಯು ಎಲೀಯನನ್ನು ಬೇಡಿಕೊಳ್ಳುತ್ತಾ ಅವನಿಗೆ, “ದೇವ ಮನುಷ್ಯನೇ, ನನ್ನ ಮತ್ತು ಈ ಐವತ್ತು ಜನರ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಿರುಗಿ ಅರಸನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವನನ್ನೂ, ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯವನು ಬಂದು ಎಲೀಯನ ಮುಂದೆ ತನ್ನ ಮೊಣಕಾಲೂರಿಕೊಂಡು ಅವನಿಗೆ, “ದೇವರ ಮನುಷ್ಯನೇ, ನೀನು ದಯಮಾಡು, ನನ್ನ ಪ್ರಾಣವೂ, ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:13
17 ತಿಳಿವುಗಳ ಹೋಲಿಕೆ  

ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.


ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ ಮೂರ್ಖತನವು ಅವನಿಂದ ತೊಲಗದು.


ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.


ಕುಯುಕ್ತಿ ಬಲಾತ್ಕಾರಗಳಿಗೆ ತಪ್ಪಿಸಿ ಅವರನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವದು.


ಅರಸನು ಆ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ಪ್ರಸನ್ನನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂದೆಗೆಯುವದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು ಎಂದು ಹೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ಆಗ ಸೌಲನು ಅವನಿಗೆ - ನಾನು ಪಾಪಮಾಡಿದೆನು; ದಾವೀದನೇ, ನನ್ನ ಮಗನೇ, ಹಿಂದಿರುಗಿ ಬಾ; ಈಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದ್ದೆಂದು ಎಣಿಸಲ್ಪಟ್ಟಿತು. ಆದದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವದಿಲ್ಲ.


ಆಗ ನಿನ್ನ ಪರಿವಾರದವರಾದ ಇವರೆಲ್ಲರೂ ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡುವರು; ಆಮೇಲೆ ನಾನು ಹೊರಟುಹೋಗುವೆನು ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ಆಗ ಎಲೀಯನು ಅವನಿಗೆ - ನಾನು ದೇವರ ಮನುಷ್ಯನಾಗಿರುವದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿಯು ಬಂದು ಅವನನ್ನೂ ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.


ಆಕಾಶದಿಂದ ಬೆಂಕಿಬಿದ್ದು ಮುಂಚೆ ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ; ನನ್ನ ಪ್ರಾಣವಾದರೋ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ ಎಂದು ಬೇಡಿಕೊಂಡನು.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು