Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:14 - ಕನ್ನಡ ಸತ್ಯವೇದವು J.V. (BSI)

14 ಆಕಾಶದಿಂದ ಬೆಂಕಿಬಿದ್ದು ಮುಂಚೆ ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ; ನನ್ನ ಪ್ರಾಣವಾದರೋ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಕಾಶದಿಂದ ಬೆಂಕಿಬಿದ್ದು ನನಗೆ ಮುಂದೆ ಬಂದ ಆ ಇಬ್ಬರು ಪಂಚಾಶದಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲವೆ? ನನ್ನ ಪ್ರಾಣವಾದರೂ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದೆಂದು ಮಾನ್ಯವಾಗಲಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪರಲೋಕದಿಂದ ಕೆಳಗಿಳಿದು ಬಂದ ಬೆಂಕಿಯು ಮೊದಲ ಇಬ್ಬರು ಸೇನಾಧಿಪತಿಗಳನ್ನೂ ಅವರ ಐವತ್ತು ಜನರನ್ನೂ ನಾಶಗೊಳಿಸಿತು. ಆದರೆ ಈಗ ನಮ್ಮ ಮೇಲೆ ಕನಿಕರ ತೋರಿ ಜೀವಿಸಲು ಅವಕಾಶ ಮಾಡಿಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ, ಅವರ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ,” ಎಂದು ಹೇಳಿ ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:14
11 ತಿಳಿವುಗಳ ಹೋಲಿಕೆ  

ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವದಿಲ್ಲ.


ಕುಯುಕ್ತಿ ಬಲಾತ್ಕಾರಗಳಿಗೆ ತಪ್ಪಿಸಿ ಅವರನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವದು.


ದೇವರಿಗೆ ಈಡನ್ನು ಕೊಟ್ಟು ಅವನ ಪ್ರಾಣವನ್ನು ಬಿಡಿಸಲಾರನು.


ನಾನು ಈಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದೆಣಿಸಿದಂತೆ ಯೆಹೋವನು ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ ಎಂದನು.


ಆಗ ಸೌಲನು ಅವನಿಗೆ - ನಾನು ಪಾಪಮಾಡಿದೆನು; ದಾವೀದನೇ, ನನ್ನ ಮಗನೇ, ಹಿಂದಿರುಗಿ ಬಾ; ಈಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದ್ದೆಂದು ಎಣಿಸಲ್ಪಟ್ಟಿತು. ಆದದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವದಿಲ್ಲ.


ಅರಸನು ಮತ್ತೊಬ್ಬ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಅವನನ್ನು - ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.


ಆಗ ಯೆಹೋವನ ದೂತನು ಎಲೀಯನಿಗೆ - ನೀನು ಇವನ ಸಂಗಡ ಹೋಗು; ಇವನಿಗೆ ಹೆದರಬೇಡ ಎಂದು ಹೇಳಿದ್ದರಿಂದ ಅವನು ಎದ್ದು ಇವನ ಜೊತೆಯಲ್ಲಿ ಅರಸನ ಬಳಿಗೆ ಹೋಗಿ ಅವನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು