Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:18 - ಕನ್ನಡ ಸತ್ಯವೇದವು J.V. (BSI)

18 ತರುವಾಯ ಅವನು ಎಲ್ಲಾ ಜನರನ್ನು ಕೂಡಿಸಿ ಅವರಿಗೆ - ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು; ಯೇಹುವಾದರೋ ಅಧಿಕವಾಗಿ ಸೇವಿಸಬೇಕೆಂದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತರುವಾಯ ಅವನು ಎಲ್ಲಾ ಜನರನ್ನು ಕೂಡಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಪೂಜಿಸಿದನು; ಯೇಹುವಾದರೋ ಅಧಿಕವಾಗಿ ಪೂಜಿಸಬೇಕೆಂದು ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಹು ಜನರನ್ನೆಲ್ಲ ಒಟ್ಟಾಗಿ ಸೇರಿಸಿ, “ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು. ಆದರೆ ಯೇಹು ಬಾಳನನ್ನು ಅಧಿಕವಾಗಿ ಸೇವಿಸುತ್ತಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ, “ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು. ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:18
9 ತಿಳಿವುಗಳ ಹೋಲಿಕೆ  

ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.


ಮೇಲು ಬರುವಂತೆ ಕೇಡು ಮಾಡೋಣ ಎಂದು ಯಾಕೆ ಹೇಳಬಾರದು? ಕೆಲವರು ನಮ್ಮನ್ನು ಕುರಿತು - ಇವರು ಹೀಗೆ ಬೋಧನೆಮಾಡುವವರೆಂದು ದೂಷಿಸಿ ಹೇಳುತ್ತಾರಲ್ಲ; ಅಂಥವರಿಗೆ ದಂಡನೆಯ ತೀರ್ಪಾಗುವದು ನ್ಯಾಯ.


ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ?


ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲವಾದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆಯು ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಕಂಬವನ್ನು ತೆಗೆದುಹಾಕಿದನು.


ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಅವನು ತಿರಿಗಿ ಅವರಿಗೆ - ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಮಂದಿ ಇದ್ದಾರೆ.


ನೀನು ಈಗ ಎಲ್ಲಾ ಇಸ್ರಾಯೇಲ್ಯರನ್ನೂ ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನೂ ಅಶೇರದೇವತೆಯ ನಾನೂರು ಮಂದಿ ಪ್ರವಾದಿಗಳನ್ನೂ ಕರ್ಮೆಲ್‍ಬೆಟ್ಟಕ್ಕೆ ಕರಿಸು ಎಂದು ಹೇಳಿದನು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು