Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:23 - ಕನ್ನಡ ಸತ್ಯವೇದವು J.V. (BSI)

23 ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳನ ಭಕ್ತರಿಗೆ - ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ ವಿಚಾರಿಸಿ ನೋಡಿರಿ; ಬಾಳನ ಭಕ್ತರು ಮಾತ್ರ ಅಲ್ಲಿರಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಯೇಹುವು ರೇಕಾಬನ ಮಗ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯ ಭಕ್ತರಿಗೆ, “ಸರ್ವೇಶ್ವರನ ಭಕ್ತರು ನಿಮ್ಮ ಮಧ್ಯೆ ಬಂದಿರುತ್ತಾರೋ ವಿಚಾರಿಸಿ ನೋಡಿ; ಬಾಳನ ಭಕ್ತರು ಮಾತ್ರ ಇಲ್ಲಿರಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯೇಹು ಮತ್ತು ರೇಕಾಬನ ಮಗನಾದ ಯೆಹೋನಾದಾಬನು ಬಾಳನ ಆಲಯದೊಳಕ್ಕೆ ಹೋದರು. ಯೇಹು ಬಾಳನ ಭಕ್ತರಿಗೆ, “ಯೆಹೋವನ ಸೇವಕರು ಯಾರೂ ನಿಮ್ಮೊಡನೆ ಇಲ್ಲವೆಂಬುದನ್ನು ಸುತ್ತಲೂ ನೋಡಿ ಖಚಿತಪಡಿಸಿಕೊಳ್ಳಿ. ಬಾಳನ ಭಕ್ತರಾದ ಜನರು ಮಾತ್ರ ಇಲ್ಲಿದ್ದಾರೆಂಬುದನ್ನು ಖಚಿತಪಡಿಸಿಕೊಳ್ಳಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೇಹುವೂ, ರೇಕಾಬನ ಮಗ ಯೆಹೋನಾದಾಬನೂ ಬಾಳನ ದೇವಸ್ಥಾನದಲ್ಲಿ ಪ್ರವೇಶಿಸಿದರು. ಯೇಹುವು, “ಬಾಳನನ್ನು ಸೇವಿಸುವವರ ಹೊರತು ಅವರ ಸಂಗಡ ಯೆಹೋವ ದೇವರ ಸೇವಕರಲ್ಲಿ ಒಬ್ಬನೂ ಇರದ ಹಾಗೆ ಪರಿಶೋಧಿಸಿ ನೋಡಿರಿ,” ಎಂದು ಬಾಳನನ್ನು ಸೇವಿಸುವವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:23
7 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು; ಅವರು ಆತನ ರಾಜ್ಯದೊಳಗಿಂದ ಎಲ್ಲಾ ಕಂಟಕರನ್ನೂ


ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.


ಸೌಲನ ಮಗನಿಗೆ ಬಾಣ, ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಬೇರೋತ್ ಎಂಬದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ;


ಯೇಹುವು ವಸ್ತ್ರಾಗಾರದ ಅಧಿಪತಿಗೆ - ಬಾಳನ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು ಎಂದು ಆಜ್ಞಾಪಿಸಲು ಅವನು ತಂದುಕೊಟ್ಟನು.


ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವದಕ್ಕಾಗಿ ಇರಿಸಿ ಅವರಿಗೆ - ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ; ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವದು ಎಂಬದಾಗಿ ಆಜ್ಞಾಪಿಸಿದ್ದನು.


ಅದಕ್ಕವರು - ನಾವು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ; ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ - ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು