Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:7 - ಕನ್ನಡ ಸತ್ಯವೇದವು J.V. (BSI)

7 ಪ್ರಧಾನ ಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಧಾನಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದುಕೊಂಡು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಜೆಸ್ರೀಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಗರದ ನಾಯಕರಿಗೆ ಈ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತುಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ಆ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:7
9 ತಿಳಿವುಗಳ ಹೋಲಿಕೆ  

ಯೆಹೋವನು ನಿನ್ನನ್ನು ಕುರಿತು - ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ಕಡಿದುಬಿಡುವೆನು.


ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಫಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡಕೊಂಡು ತನ್ನ ಆಳಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.


ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ - ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು?


ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ - ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಮನಸ್ಸುಳ್ಳವರಾಗಿದ್ದರೆ ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ ಎಂದು ಆಜ್ಞಾಪಿಸಿದನು. ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.


ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ಮುಟ್ಟಿದಾಗ ಅವನು - ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಲಿನ ಹತ್ತಿರ ಎರಡು ರಾಶಿಗಳಾಗಿ ಹಾಕಬೇಕೆಂದು ಆಜ್ಞಾಪಿಸಿದನು.


ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು