Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:1 - ಕನ್ನಡ ಸತ್ಯವೇದವು J.V. (BSI)

1 ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಫಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:1
17 ತಿಳಿವುಗಳ ಹೋಲಿಕೆ  

ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ವಿುಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.


ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ ಅವನ ಸಂಗಡ ವಿುಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಸಂಹರಿಸಿದನು.


ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಅತಿ ದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗೋಸ್ಕರ ಕೊಟ್ಟುಬಿಟ್ಟರಲ್ಲಾ ಎಂದು ಹೇಳಿದನು.


ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ - ಅವನನ್ನೂ ರಥದಲ್ಲಿಯೇ ಹೊಡಿಯಿರಿ ಎಂದು ಕೂಗಲು ಅವನ ಜನರು ಇಬ್ಲೆಯಾವಿುನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಒಂದು ವರುಷ ಆಳಿದನು. ಇಸ್ರಾಯೇಲ್ಯರ ಅರಸನಾದ ಒವ್ರಿುಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.


ಅವರು ಹೋದ ಮೇಲೆ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ನೀನು ಎದ್ದು ಈ ಕೂಸನ್ನೂ ಇದರ ತಾಯಿಯನ್ನೂ ಕರಕೊಂಡು ಐಗುಪ್ತದೇಶಕ್ಕೆ ಓಡಿಹೋಗಿ ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಅಂದನು.


ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.


ಇದಲ್ಲದೆ ಅರಸನು ಅವನಿಗೆ - ನೀನು ನನ್ನ ತಂದೆಯಾದ ದಾವೀದನಿಗೆ ವಿರೋಧವಾಗಿ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.


ಪ್ರಧಾನ ಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.


ಇದಲ್ಲದೆ ನಿಮ್ಮ ರಕ್ತವನ್ನು ಸುರಿಸಿ ಜೀವತೆಗೆಯುವವರಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ ಮನುಷ್ಯನಾಗಿದ್ದರೆ, ಹತವಾದವನು ಅವನ ಸಹೋದರನಾಗಿರುವದರಿಂದ, ಅವನಿಗೂ ಮುಯ್ಯಿ ತೀರಿಸುವೆನೆಂದು ತಿಳಿದುಕೊಳ್ಳಿರಿ.


ನರಹತ್ಯವು ಸಹೋದರ ಹತ್ಯವಲ್ಲವೇ. ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿಯೇ ಉಂಟುಮಾಡಿದನಾದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾರೋ ಅವರ ರಕ್ತವನ್ನು ಮನುಷ್ಯರೇ ಸುರಿಸುವರು.


ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.


ಯೆಹೋವಾಷನು ಯೇಹುವಿನ ಆಳಿಕೆಯ ಏಳನೆಯ ವರುಷದಲ್ಲಿ ಅರಸನಾಗಿ ಯೆರೂಸಲೇವಿುನಲ್ಲಿ ನಾಲ್ವತ್ತು ವರುಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು