Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:15 - ಕನ್ನಡ ಸತ್ಯವೇದವು J.V. (BSI)

15 ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ ಹೊರಗೆ ಕರಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಜಕನಾದ ಯೆಹೋಯಾದಾವನು ಸೈನಿಕರ ಮೇಲ್ವಿಚಾರಕರಾದ ಸೇನಾಧಿಪತಿಗಳಿಗೆ ಆಜ್ಞಾಪಿಸಿದನು. ಯೆಹೋಯಾದಾವನು ಅವರಿಗೆ, “ಅತಲ್ಯಳನ್ನು ಆಲಯದ ಆವರಣದಿಂದ ಹೊರಗೆ ತೆಗೆದುಕೊಂಡು ಹೋಗಿ. ಅವಳ ಹಿಂಬಾಲಕರು ಯಾರೇ ಆಗಿದ್ದರೂ ಕೊಂದುಬಿಡಿ. ಆದರೆ ಅವರನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:15
10 ತಿಳಿವುಗಳ ಹೋಲಿಕೆ  

ನರಪುತ್ರನೇ, ನೀನು ದೈವಸಂಕಲ್ಪವನ್ನು ಸಾರಿ ಚಪ್ಪಾಳೆಬಡಿ; ಖಡ್ಗವು ಎರಡರಷ್ಟು ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ ಅಧಿಪತಿಯನ್ನು ಹತಿಸುವ ಖಡ್ಗ!


ಆತನು ಅವರಿಗೆ - ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ ದೇವಾಲಯವನ್ನು ಹೊಲೆಗೆಡಿಸಿರಿ ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.


ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರಕೊಂಡು ಹೋಗಿ ಅವರಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು.


ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ ಗುರಾಣಿ ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟು


ಏಳನೆಯ ವರುಷದಲ್ಲಿ ಯೆಹೋಯಾದಾವನು ಕಾರಿ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡನಂತರ


ಆಗ ಪಟ್ಟಣವೆಲ್ಲಾ ಕಲಕಿಹೋಯಿತು, ಜನರು ಎಲ್ಲಾ ಕಡೆಯಿಂದ ಓಡಿಬಂದು ಕೂಡಿದರು. ಮತ್ತು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದರು. ಕೂಡಲೇ ಬಾಗಿಲುಗಳನ್ನು ಮುಚ್ಚಿದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.


ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು.


ಕೊಲ್ಲಬೇಕೆಂಬ ಉದ್ದೇಶದಿಂದಲೇ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಯಜ್ಞವೇದಿಯ ಬಳಿಯಿಂದಲೂ ಎಳೆದು ಅವನಿಗೆ ಮರಣಶಿಕ್ಷೆಯನ್ನು ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು