Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:10 - ಕನ್ನಡ ಸತ್ಯವೇದವು J.V. (BSI)

10 ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡು ಬಂದಾಗೆಲ್ಲಾ ರಾಜಲೇಖಕನೂ ಮಹಾಯಾಜಕನೂ ಬಂದು ಅದನ್ನು ಚೀಲಗಳಲ್ಲಿ ಹಾಕಿ ತೂಕಮಾಡಿ ಯೆಹೋವನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡುಬಂದಾಗೆಲ್ಲಾ, ರಾಜಲೇಖಕನು ಹಾಗು ಮಹಾಯಾಜಕನು ಬಂದು ಅದನ್ನು ಚೀಲಗಳಲ್ಲಿ ಹಾಕಿ, ತೂಕಮಾಡಿ, ಸರ್ವೇಶ್ವರನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜನರು ದೇವಾಲಯಕ್ಕೆ ಹೋದಾಗ ಆ ಪೆಟ್ಟಿಗೆಯಲ್ಲಿ ಹಣವನ್ನು ಹಾಕಲಾರಂಭಿಸಿದರು. ರಾಜನ ಕಾರ್ಯದರ್ಶಿಯಾಗಲಿ ಪ್ರಧಾನಯಾಜಕನಾಗಲಿ ನೋಡಿದಾಗ ಸಾಕಷ್ಟು ಹಣವು ತುಂಬಿದ್ದರೆ ಅದನ್ನು ಲೆಕ್ಕಹಾಕಿ ಚೀಲಗಳಲ್ಲಿ ತುಂಬಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪೆಟ್ಟಿಗೆಯಲ್ಲಿ ಬಹಳ ಹಣ ಉಂಟೆಂದು ಅವರು ಕಂಡಾಗಲೆಲ್ಲಾ ಅರಸನ ಲೇಖಕನೂ, ಮಹಾಯಾಜಕನೂ ಬಂದು, ಯೆಹೋವ ದೇವರ ಆಲಯದಲ್ಲಿ ತಂದಿದ್ದ ಹಣವನ್ನು ಎಣಿಸಿ, ಚೀಲಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:10
11 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು;


ಬಟ್ಟೆಗಳನ್ನು ಹರಿದುಕೊಂಡು ಯಾಜಕನಾದ ಹಿಲ್ಕೀಯನು, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಹಸ್ತಕನಾದ ಅಸಾಯ ಎಂಬವರಿಗೆ -


ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ ಅವರಿಗೆ ಆಜ್ಞಾಪಿಸಿದ್ದೇನಂದರೆ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಅವನಿಗೆ -


ನಾಮಾನನು - ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೇ ಎಂದು ಅವನನ್ನು ಒತ್ತಾಯಪಡಿಸಿ ಅದನ್ನು ಎರಡು ಚೀಲಗಳಲ್ಲಿ ಹಾಕಿಸಿ ಆ ಚೀಲಗಳನ್ನೂ ಎರಡು ದುಸ್ತುಬಟ್ಟೆಗಳನ್ನೂ ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಇವನ ಮುಂದೆ ನಡೆದರು.


ಶೆವನು ಲೇಖಕನು; ಚಾದೋಕ್ ಎಬ್ಯಾತಾರರು ಯಾಜಕರು;


ಅದನ್ನು ಆಲಯದ ಕೆಲಸವನ್ನು ನಡಿಸುವ ಮೊಕ್ತೇಸರರಿಗೆ ಒಪ್ಪಿಸುವರು; ಇವರು ಅದನ್ನು ಅಲ್ಲಿ ಕೆಲಸಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಕಲ್ಲುಕುಟಿಕ


ಪೆಟ್ಟಿಗೆಯಲ್ಲಿ ತುಂಬಾ ಹಣವಿರುತ್ತದೆಂದು ಕಂಡುಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು ರಾಜಕೀಯ ಅಧ್ಯಕ್ಷರ ಬಳಿಗೆ ತರುವರು. ಆಗ ಅರಸನ ಲೇಖಕನೂ ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವುಮಾಡಿ ತಿರಿಗಿ ಅದರ ಸ್ಥಳದಲ್ಲಿಡುವರು. ಅವರು ಪ್ರತಿದಿನವೂ ಈ ಪ್ರಕಾರ ಮಾಡುತ್ತಿದ್ದದರಿಂದ ಬಹಳ ಹಣವನ್ನು ಕೂಡಿಸಿದರು.


ತರುವಾಯ ಅವನು ಮಹಾಯಾಜಕನಾದ ಹಿಲ್ಕೀಯನು, ಎರಡನೆಯ ತರಗತಿಯ ಯಾಜಕರು, ದ್ವಾರಪಾಲಕರು ಇವರ ಮುಖಾಂತರವಾಗಿ ಬಾಳ್, ಅಶೇರ ಎಂಬ ದೇವತೆಗಳಿಗೋಸ್ಕರವೂ ಆಕಾಶ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ ಅವನ ಗೋತ್ರ ಬಂಧುಗಳಾದ ವಿುಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕಸೇವೆಗೆ ನೇವಿುಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶಸ್ಥಳವನ್ನು ಕಾಯುವವರಾಗಿದ್ದರು.


ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು