Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:9 - ಕನ್ನಡ ಸತ್ಯವೇದವು J.V. (BSI)

9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತುಮಾಡಿ ಅದನ್ನು ಯೆಹೋವನ ಆಲಯದ ಬಾಗಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು, ಅದರ ಮುಚ್ಚಳದಲ್ಲಿ ತೂತುಮಾಡಿ, ಅದನ್ನು ಸರ್ವೇಶ್ವರನ ಆಲಯದ ಬಾಗಿಲಿನ ಬಲಗಡೆಯಲ್ಲಿ, ಬಲಿಪೀಠದ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಅದರ ಮೇಲೆ ಒಂದು ರಂಧ್ರ ಮಾಡಿದನು. ನಂತರ ಯೆಹೋಯಾದಾವನು ಆ ಪೆಟ್ಟಿಗೆಯನ್ನು ಯಜ್ಞವೇದಿಕೆಯ ಬಲಗಡೆಯಲ್ಲಿ ಇಟ್ಟನು. ದೇವಾಲಯಕ್ಕೆ ಜನರು ಬರುವ ಬಾಗಿಲಿನಲ್ಲಿ ಈ ಪೆಟ್ಟಿಗೆಯಿತ್ತು. ಕೆಲವು ಮಂದಿ ಯಾಜಕರು ಆಲಯದ ಬಾಗಿಲಿನಲ್ಲಿ ರಕ್ಷಕರಾಗಿ ನಿಂತರು. ಆ ಯಾಜಕರು ಜನರು ಯೆಹೋವನಿಗೆಂದು ಕೊಡುವ ಆ ಹಣವನ್ನು ಪೆಟ್ಟಿಗೆಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಅದರ ಮುಚ್ಚಳದಲ್ಲಿ ಒಂದು ರಂಧ್ರವನ್ನು ಮಾಡಿದನು. ಅವನು ಅದನ್ನು ಬಲಿಪೀಠದ ಬಳಿಯಲ್ಲಿ ಯೆಹೋವ ದೇವರ ಆಲಯ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಿಲು ಕಾಯುವ ಯಾಜಕರು ಯೆಹೋವ ದೇವರ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿ ಹಾಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:9
12 ತಿಳಿವುಗಳ ಹೋಲಿಕೆ  

ಯೇಸು ಬೊಕ್ಕಸದ ಮನೆಗೆ ಎದುರಾಗಿ ಕೂತುಕೊಂಡು ಜನರು ಬೊಕ್ಕಸದಲ್ಲಿ ಹಣ ಹಾಕುವದನ್ನು ನೋಡುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಬಹಳ ಬಹಳ ಹಾಕುತ್ತಿರಲು


ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಕಂಡನು.


ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ


ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯ್ದುಕೊಂಡಿರುವದೇ ಲೇಸು.


ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ, ಎಲೀಯೆಜೆರ್ ಎಂಬ ಯಾಜಕರು ತುತೂರಿಗಳನ್ನು ಊದುತ್ತಾ ದೇವಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್, ಯೆಹೀಯ ಎಂಬವರು ಮಂಜೂಷಾಲಯದ ದ್ವಾರಪಾಲಕರು.


ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು,


ತಮ್ಮ ಸಹೋದರರೊಳಗೆ ಎರಡನೆಯ ತರಗತಿಯವರಾದ ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ವಿುಕ್ನೇಯ, ದ್ವಾರಪಾಲಕರಾದ ಓಬೇದೆದೋಮ್ ಯೆಗೀಯೇಲರು ಇವರನ್ನು ನೇವಿುಸಿದರು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು,


ತರುವಾಯ ಅವನು ಮಹಾಯಾಜಕನಾದ ಹಿಲ್ಕೀಯನು, ಎರಡನೆಯ ತರಗತಿಯ ಯಾಜಕರು, ದ್ವಾರಪಾಲಕರು ಇವರ ಮುಖಾಂತರವಾಗಿ ಬಾಳ್, ಅಶೇರ ಎಂಬ ದೇವತೆಗಳಿಗೋಸ್ಕರವೂ ಆಕಾಶ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ - ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಿ


ಆಗ ಯಾಜಕರು ಅವನಿಗೆ - ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವದಿಲ್ಲ. ದೇವಾಲಯದ ಜೀರ್ಣೋದ್ಧಾರಕ್ಕೆ ಕೈಹಾಕುವದಿಲ್ಲ ಎಂಬದಾಗಿ ಮಾತುಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು