Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:28 - ಕನ್ನಡ ಸತ್ಯವೇದವು J.V. (BSI)

28 ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯಾರೊಬ್ಬಾಮನ ಉಳಿದ ಚರಿತ್ರೆ, ಅವನು ಯುದ್ಧದಲ್ಲಿ ನಡೆಸಿದ ಶೂರಕಾರ್ಯ ಮತ್ತು ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಇವನಿಂದ ಇಸ್ರಯೇಲ್ ರಾಜ್ಯಕ್ಕೆ ವಶವಾದ ವಿವರ, ಇವೆಲ್ಲವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯಾರೊಬ್ಬಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಅವನ ಪರಾಕ್ರಮವೂ, ಅವನ ಯುದ್ಧಗಳೂ, ಯೆಹೂದಕ್ಕೆ ಸೇರಿದ ದಮಸ್ಕವನ್ನೂ, ಹಮಾತನ್ನೂ ಇಸ್ರಾಯೇಲಿಗೋಸ್ಕರ ಹಿಂದಿರುಗಿ ತೆಗೆದುಕೊಂಡದ್ದೂ, ಇಸ್ರಾಯೇಲಿನ ಅರಸುಗಳ ದಿನಚರ್ಯೆಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:28
10 ತಿಳಿವುಗಳ ಹೋಲಿಕೆ  

ದಾವೀದನು ಚೋಬದವರನ್ನು ಸಂಹರಿಸಿದಾಗ ಇವನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಮಂದಿಯನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.


ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.


ಅವನು ಇಸ್ರಾಯೇಲ್‍ರಾಜರಾಗಿದ್ದ ತನ್ನ ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಜೆಕರ್ಯನು ಅರಸನಾದನು.


ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ಲಿಖಿತರಾದರು.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅಹಜ್ಯನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಇಸ್ರಾಯೇಲ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲ್ಯರ ರಾಜಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯಾರೊಬ್ಬಾಮನು ಅರಸನಾದನು.


ನಾನು ದಮಸ್ಕದ ಲಾಳವಂಡಿಗೆಯನ್ನು ಮುರಿದು ಆವೆನ್ ತಗ್ಗಿನೊಳಗಿಂದ ಸಿಂಹಾಸನಾಸೀನನನ್ನೂ ಬೇತ್ ಎದೆನಿನಿಂದ ರಾಜದಂಡಧಾರಿಯನ್ನೂ ನಿರ್ಮೂಲಮಾಡುವೆನು; ಅರಾಮ್ಯರು ಕೀರಿಗೆ ಸೆರೆಯಾಗಿ ಹೋಗುವರು; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು