Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:5 - ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಇವನನ್ನು ಕುಷ್ಠ ರೋಗದಿಂದ ಬಾಧಿಸಿದನು. ಆದದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು; ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರಸ್ವಾಮಿ ಇವನನ್ನು ಕುಷ್ಠರೋಗದಿಂದ ಶಿಕ್ಷಿಸಿದರು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಾಜನಾದ ಅಜರ್ಯನು ಕುಷ್ಠರೋಗ ಪೀಡಿತನಾಗುವಂತೆ ಯೆಹೋವನು ಮಾಡಿದನು. ಅವನು ಸಾಯುವವರೆಗೂ ಕುಷ್ಠರೋಗಿಯಾಗಿಯೇ ಇದ್ದನು. ಅಜರ್ಯನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸುತ್ತಿದ್ದನು. ರಾಜನ ಮಗನಾದ ಯೋತಾಮನು ರಾಜನ ಅರಮನೆಯನ್ನು ನೋಡಿಕೊಳ್ಳುತ್ತಿದ್ದನು ಮತ್ತು ಜನರನ್ನು ಪಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಅರಸನನ್ನು ಮರಣದ ದಿವಸದವರೆಗೂ ಕುಷ್ಠರೋಗದಿಂದ ಬಾಧಿಸಿದ್ದರಿಂದ, ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:5
20 ತಿಳಿವುಗಳ ಹೋಲಿಕೆ  

ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.


ಅದಕ್ಕೆ ಯೆಹೋವನು - ತಂದೆ ಮುಖದ ಮೇಲೆ ಉಗುಳಿದರೆ ಆಕೆ ಹೇಗೂ ಏಳು ದಿವಸ ನಾಚಿಕೆಯಿಂದ ಮರೆಯಾಗುವದಿಲ್ಲವೇ; ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು; ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು ಎಂದು ಉತ್ತರಕೊಟ್ಟನು.


ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು ಕಲಿಸಿಕೊಡು; ರಾಜಕುಮಾರನಾದ ಅವನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಊರುಬಾಗಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ - ನಾವು ಸಾಯುವ ತನಕ ಇಲ್ಲೇ ಕೂತಿರಬೇಕೋ?


ನಾಮಾನನ ಕುಷ್ಠವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವದು ಅಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಅವನು ಹಿಮದಂತೆ ಬಿಳುಪಾಗಿ ಅವನ ಸನ್ನಿಧಿಯಿಂದ ಹೊರಟುಹೋದನು.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರೆಲ್ಲರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ ಕುಷ್ಠರೋಗಿಗಳೂ ಕುಂಟರೂ ಕತ್ತಿಯಿಂದ ಹತರಾಗುವವರೂ ಭಿಕ್ಷೆ ಬೇಡುವವರೂ ಇದ್ದೇ ಇರಲಿ ಅಂದನು.


ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಅಜರ್ಯನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ಲಿಖಿತರಾದರು.


ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ಯೆಹೂದದ ಅರಸನಾದ ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇವಿುನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕಂಡುಬಂದ ಯೆಹೋವನ ವಾಕ್ಯ.


ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರುಷದಲ್ಲಿ ಯೆಹೂದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು.


ಇವನ ಮಗನು ಯೆಹೋವಾಷ್; ಇವನ ಮಗನು ಅಮಚ್ಯ; ಇವನ ಮಗನು ಅಜರ್ಯ; ಇವನ ಮಗನು ಯೋತಾಮ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು