Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:8 - ಕನ್ನಡ ಸತ್ಯವೇದವು J.V. (BSI)

8 ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಮೂವತ್ತೆಂಟನೆಯ ವರುಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬವನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ಜೆಕರ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಆರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾರೊಬ್ಬಾಮನ ಮಗನಾದ ಜೆಕರ್ಯನು ಇಸ್ರೇಲಿನ ಸಮಾರ್ಯದಲ್ಲಿ ಆರು ತಿಂಗಳ ಕಾಲ ಆಳಿದನು. ಅದು ಯೆಹೂದದ ರಾಜನಾಗಿದ್ದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾದನು. ಅವನು ಆರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:8
14 ತಿಳಿವುಗಳ ಹೋಲಿಕೆ  

ಅವನು ಇಸ್ರಾಯೇಲ್‍ರಾಜರಾಗಿದ್ದ ತನ್ನ ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಜೆಕರ್ಯನು ಅರಸನಾದನು.


ಅನಂತರ ಎಲ್ಲಾ ಯೆಹೂದ್ಯರು ಕೂಡಿ ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಆಳಿಕೆಯ ಇಪ್ಪತ್ತೇಳನೆಯ ವರುಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ರಾಜಕುಟುಂಬದ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.


ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಯೆಹೂದದ ಅರಸನಾದ ಉಜ್ಜೀಯನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.


ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.


ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಐವತ್ತನೆಯ ವರುಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬವನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಎರಡು ವರುಷ ಆಳಿದನು.


ದೇಶವು ಅಧರ್ಮದಿಂದ ಬಹುನಾಯಕವಾಗುವದು; ಜ್ಞಾನಿಗಳೂ ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗುವದು.


ಯೆಹೋವನು ಅವನನ್ನು ಕುರಿತು - ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹುವಂಶದವರಿಗೆ ಮುಯ್ಯಿತೀರಿಸಿ ಇಸ್ರಾಯೇಲ್‍ಜನಾಂಗವನ್ನು ನಿರ್ನಾಮಮಾಡುವೆನು;


ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಬೀಡುಬೀಳುವವು; ನಾನು ಕತ್ತಿಹಿರಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.


ಯೆಹೋವನು ಯೇಹುವಿಗೆ - ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದಿ; ಆದದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು