Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:15 - ಕನ್ನಡ ಸತ್ಯವೇದವು J.V. (BSI)

15 ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯದಲ್ಲಿ ದಹನಬಲಿಯನ್ನೂ, ಸಾಯಂಕಾಲದ ಧಾನ್ಯ ಸಮರ್ಪಣೆಯನ್ನೂ, ಪಾನದ್ರವ್ಯವನ್ನೂ ದೊಡ್ಡ ಹೊಸ ಬಲಿಪೀಠದ ಮೇಲೆ ಅರ್ಪಿಸಿ, ದಹನಬಲಿಯ ರಕ್ತವೆಲ್ಲವನ್ನೂ ಚಿಮುಕಿಸಿದನು. ಆದರೆ ಕಂಚಿನ ಬಲಿಪೀಠವನ್ನು ನಾನು ಮಾರ್ಗದರ್ಶನಕ್ಕಾಗಿ ಉಪಯೋಗಿಸುವೆನು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:15
25 ತಿಳಿವುಗಳ ಹೋಲಿಕೆ  

ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;


ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದದರಿಂದ ಸೊಲೊಮೋನನು ಆ ದಿವಸ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು.


ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ನಿತ್ಯಹೋಮವು ನೀಗಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತೊಂಭತ್ತು ದಿನಗಳು ಕಳೆಯಬೇಕು.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ ನಿತ್ಯಹೋಮವನ್ನು ನೀಗಿಸಿ ಹಾಳುಮಾಡುವ ಅಸಹ್ಯ ವಸ್ತುವನ್ನು ಪ್ರತಿಷ್ಠಿಸುವದು.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.


ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ


ಯಾಕೋಬನ ಮನೆತನದವರು ಮೂಡಣ ದೇಶಗಳ [ಮಂತ್ರತಂತ್ರಗಳಲ್ಲಿ] ಮಗ್ನರೂ ಫಿಲಿಷ್ಟಿಯರ ಹಾಗೆ ಕಣಿಹೇಳುವವರೂ ಅನ್ಯದೇಶಗಳವರ ಸಂಗಡ ಒಪ್ಪಂದಮಾಡುವವರೂ ಆಗಿರುವದರಿಂದ ಈ ನಿನ್ನ ಜನರನ್ನು ಕೈಬಿಟ್ಟಿದ್ದೀಯಷ್ಟೆ.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ತಮ್ಮನ್ನು ಶುದ್ಧಪಡಿಸಿಕೊಳ್ಳುವದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು. ಇದಲ್ಲದೆ ಯಾಜಕರು ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನಯಜ್ಞಗಳ ಕೊಬ್ಬು, ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.


ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆಗಾಗಿಯೇ.


ಇದಲ್ಲದೆ ಯೆಹೋವನ ಆಲಯಕ್ಕೂ ತನ್ನ ವೇದಿಗೂ ಮಧ್ಯದಲ್ಲಿದ್ದು ಆವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರವೇದಿಯನ್ನು ಆಲಯದ ಎದುರಿನಿಂದ ತೆಗೆಯಿಸಿ ತನ್ನ ವೇದಿಯ ಉತ್ತರ ದಿಕ್ಕಿನಲ್ಲಿಡಿಸಿ


ಪ್ರಾತಃಕಾಲನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಫಕ್ಕನೆ ಎದೋವಿುನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.


ಅರಸನಾದ ಸೊಲೊಮೋನನು ಯಜ್ಞಮಾಡುವದಕ್ಕೋಸ್ಕರ ಪೂಜಾಸ್ಥಳಗಳಲ್ಲಿ ವಿಶೇಷವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದಾಗ


ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ. ಅದರಲ್ಲಿ ನೋಡಿ ಶಕುನ ಹೇಳುವದಿಲ್ಲವೇ. ನೀವು ಮಾಡಿದ್ದು ಬಹಳ ಕೆಟ್ಟದ್ದು ಅನ್ನಬೇಕೆಂದು ಹೇಳಿದನು.


ಯಾಜಕನಾದ ಊರೀಯನು ಅರಸನು ಹೇಳಿದಂತೆಯೇ ಮಾಡಿದನು.


ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು