Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:7 - ಕನ್ನಡ ಸತ್ಯವೇದವು J.V. (BSI)

7 ಆಹಾಜನು ಅಶ್ಶೂರ್‍ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನಿನ್ನ ದಾಸನೂ ಮಗನೂ ಆಗಿದ್ದೇನೆ; ನೀನು ಬಂದು ನನ್ನನ್ನು ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲ್ಯರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಹಾಜನು ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪೆಲೆಸರನ ಬಳಿಗೆ ದೂತರನ್ನು ಕಳುಹಿಸಿ, “ನಾನು ನಿಮ್ಮ ಸೇವಕ ಹಾಗು ಕುವರ; ನೀವು ಬಂದು ನನ್ನನ್ನು, ನನಗೆ ವಿರುದ್ಧ ದಂಡೆತ್ತಿ ಬಂದಿರುವ ಸಿರಿಯಾದವರ ಮತ್ತು ಇಸ್ರಯೇಲರ ಅರಸುಗಳ ಕೈಗೆ ಸಿಕ್ಕದಂತೆ, ಕಾಪಾಡಿ,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನಿಗೆ, “ನಾನು ನಿನ್ನ ಸೇವಕನೂ, ನಿನ್ನ ಮಗನೂ ಆಗಿದ್ದೇನೆ. ನನಗೆ ವಿರೋಧವಾಗಿ ಎದ್ದ ಅರಾಮಿನ ಅರಸನ ಕೈಗೂ, ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ, ರಕ್ಷಿಸುವುದಕ್ಕೆ ಬರಬೇಕು,” ಎಂದು ಹೇಳಿ ಸೇವಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:7
17 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.


ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.


ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.


ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.


ಆದದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್ ಹಾರ ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆಯೊಯ್ದರು. ಅವರು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಅದಕ್ಕೆ ಇಸ್ರಾಯೇಲ್ಯರ ಅರಸನು - ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ; ನನಗಿರುವದೆಲ್ಲವೂ ನಿನ್ನದೇ ಎಂದು ಉತ್ತರಕೊಟ್ಟು ಕಳುಹಿಸಿದನು.


ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಶ್ಶೂರದ ಅರಸನಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರನಾದನು.


ಯಾಕೋಬನ ಮನೆತನದವರು ಮೂಡಣ ದೇಶಗಳ [ಮಂತ್ರತಂತ್ರಗಳಲ್ಲಿ] ಮಗ್ನರೂ ಫಿಲಿಷ್ಟಿಯರ ಹಾಗೆ ಕಣಿಹೇಳುವವರೂ ಅನ್ಯದೇಶಗಳವರ ಸಂಗಡ ಒಪ್ಪಂದಮಾಡುವವರೂ ಆಗಿರುವದರಿಂದ ಈ ನಿನ್ನ ಜನರನ್ನು ಕೈಬಿಟ್ಟಿದ್ದೀಯಷ್ಟೆ.


ಮತ್ತು ಇಷ್ಟೂ ಸಾಲದೆಂದು ಅಶ್ಯೂರ್ಯರೊಂದಿಗೂ ಹಾದರಮಾಡಿದಿ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ಒಹೊಲಳು ನನ್ನ ಹೆಂಡತಿಯಾಗಿದ್ದರೂ ಸೂಳೆಯಾಗಿ ನಡೆದು ತನ್ನ ವಿುಂಡರನ್ನು ಅಂದರೆ


ಇವಳು ನಾಯಕೋಪನಾಯಕರೂ ಯೋಧರೂ ವಿಚಿತ್ರಾಂಬರರೂ ಅಶ್ವಾರೂಢರೂ ಯಾರೂ ತಪ್ಪದೆ ಮನೋಹರ ಯುವಕರೂ ಆದ ಅಶ್ಶೂರ್ಯರನ್ನು ಮೋಹಿಸಿದಳು.


ನಿನ್ನಲ್ಲಿ ಬಳಿಕೆಗೊಳ್ಳುವಂತೆ ನೀನು ಅಭ್ಯಾಸಮಾಡಿಸಿದವರನ್ನು [ಯೆಹೋವನು] ನಿನಗೆ ತಲೆಯಾಗಿ ನೇವಿುಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವದಲ್ಲವೆ.


ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು