Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:14 - ಕನ್ನಡ ಸತ್ಯವೇದವು J.V. (BSI)

14 ಅವರು ದೇವರಾದ ಯೆಹೋವನನ್ನು ನಂಬದೆ ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಆತನಿಗೆ ಕಿವಿಗೊಡದೆ ಹೋದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಅವರು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ; ತಮ್ಮ ದೇವರಾದ ಯೆಹೋವನನ್ನು ನಂಬದೆಹೋದ ತಮ್ಮ ಪೂರ್ವಿಕರನ್ನೇ ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಅವರು ಕೇಳದೆ ತಮ್ಮ ದೇವರಾದ ಯೆಹೋವ ದೇವರಲ್ಲಿ ನಂಬಿಕೆ ಇಡದೆ ತಮ್ಮ ಪಿತೃಗಳಂತೆ ದೇವರ ಆಜ್ಞೆಗಳಿಗೆ ಮಣಿಯದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:14
27 ತಿಳಿವುಗಳ ಹೋಲಿಕೆ  

ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಮತ್ತು ಅವರು ಆ ರಮಣೀಯದೇಶವನ್ನು ತಿರಸ್ಕರಿಸಿ ಆತನ ಮಾತನ್ನು ನಂಬಲಿಲ್ಲ.


ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆಹೋದರು.


ಆತನಿಗೆ ಇಸ್ರಾಯೇಲ್ಯರ ಮೇಲೆ ಕೋಪವುಂಟಾಯಿತು; ಯಾಕೋಬ್‍ವಂಶದವರಲ್ಲಿ ಬೆಂಕಿಹತ್ತಿತು.


ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.


ಆದರೂ ನೀವು ನಿಮ್ಮ ದೇವರಾದ ಯೆಹೋವನನ್ನು ಇನ್ನೂ ನಂಬಲೇ ಇಲ್ಲ.


ಅದಲ್ಲದೆ ಯೆಹೋವನು ಮೋಶೆಗೆ - ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ; ಇವರು ನನ್ನ ಆಜ್ಞೆಗೆ ಬೊಗ್ಗದವರಾಗಿದ್ದಾರೆ;


ಆಗ ಯೆಹೋವನು ಮೋಶೆಗೆ - ನೀವು ಎಲ್ಲಿಯವರೆಗೂ ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರೋ;


ಅದು ಹಾಲೂ ಜೇನೂ ಹರಿಯುವ ದೇಶವೇ. ಆದರೆ ನಾನೇ ನಿಮ್ಮ ಸಂಗಡ ಬರುವದಿಲ್ಲ; ನೀವು ನನ್ನ ಆಜ್ಞೆಗೆ ಬೊಗ್ಗದವರಾದ್ದರಿಂದ ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸೇನು ಅಂದನು.


ಅದಲ್ಲದೆ ಆತನು ನನಗೆ - ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಒಳಗಾಗದವರು.


ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.


ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿ ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ನನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಎಚ್ಚರಿಸಿದಿ. ಆದರೂ ಅವರು ಲಾಲಿಸದೆ ಗರ್ವಿಗಳೂ ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು; ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿ ನ್ಯಾಯಗಳನ್ನು ಮೀರಿ ಪಾಪಮಾಡಿ ಹೆಗಲು ಕೊಡದೆ ಮೊಂಡಬಿದ್ದು ನಿನ್ನ ಮಾತನ್ನು ಕೇಳದೆ ಹೋದರು.


ಅವಳು ಇವುಗಳನ್ನೆಲ್ಲಾ ನಡಿಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.


ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.


ನರಪುತ್ರನೇ, ನೀನು ದ್ರೋಹಿವಂಶದ ಮಧ್ಯದಲ್ಲಿ ವಾಸಿಸುತ್ತೀ, ಆ ವಂಶದವರು ದ್ರೋಹಿಗಳಾಗಿರುವದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


[ಪ್ರವಾದಿಗಳು ] ಕರೆಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು; ಬಾಳ್‍ದೇವತೆಗಳಿಗೆ ಯಜ್ಞಮಾಡಿ ಬೊಂಬೆಗಳಿಗೆ ಧೂಪಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು