Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:21 - ಕನ್ನಡ ಸತ್ಯವೇದವು J.V. (BSI)

21 ಆತನು ಇಸ್ರಾಯೇಲ್ ರಾಜ್ಯವನ್ನು ದಾವೀದಸಂತಾನದವರ ಕೈಯಿಂದ ಕಿತ್ತುಕೊಂಡನಂತರ ಇಸ್ರಾಯೇಲ್ಯರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಳ್ಳಲು ಅವನು ಅವರನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲ್ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ, ಇಸ್ರಯೇಲರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಸರ್ವೇಶ್ವರನ ಭಕ್ತಿಮಾರ್ಗದಿಂದ ತಪ್ಪಿಸಿ ಮಹಾಪಾಪಕ್ಕೆ ಒಳಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರು ಇಸ್ರಾಯೇಲನ್ನು ದಾವೀದನ ಸಂತಾನದಿಂದ ವಿಭಾಗಿಸಿದಾಗ, ಅವರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲನ್ನು ಯೆಹೋವ ದೇವರ ಮಾರ್ಗದಿಂದ ತಪ್ಪಿಸಿ, ಮಹಾ ಪಾಪಮಾಡಲು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:21
19 ತಿಳಿವುಗಳ ಹೋಲಿಕೆ  

ಅವನಿಗೆ - ನೀನು ಈ ಪ್ರಕಾರ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.


ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ, ಇಸ್ರಾಯೇಲ್‍ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ಮತ್ತು ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಈಚೆಗೆ ಸಂಭವಿಸಿದ ದುಷ್ಕಾಲವನ್ನು ಯೆಹೋವನು ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಬರಮಾಡುವನು; ಆ ದುಷ್ಕಾಲವು ಅಶ್ಶೂರದ ಅರಸೇ.


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿವಿುತ್ತ ಅದನ್ನು ಕ್ಷವಿುಸು.


ತಾವು ಏರ್ಪಡಿಸಿದ ಪೂಜಾಸ್ಥಳ ಅಜದೇವತೆ ಬಸವಮೂರ್ತಿ ಇವುಗಳಿಗೋಸ್ಕರ ಬೇರೆ ಪೂಜಾರಿಗಳನ್ನು ನೇವಿುಸಿಕೊಂಡದ್ದರಿಂದ ಅವರು ಗೋಮಾಳಗಳುಳ್ಳ ತಮ್ಮ ಸ್ವಾಸ್ತ್ಯಗಳನ್ನು ಬಿಟ್ಟು ಯೆಹೂದ ದೇಶಕ್ಕೂ ಯೆರೂಸಲೇವಿುಗೂ ಬಂದರು.


ಅವನು ಈ ಕೋಟೆಗಳನ್ನು ಬಲಪಡಿಸಿ ನಾಯಕರ ವಶಕ್ಕೆ ಕೊಟ್ಟು ಪ್ರತಿಯೊಂದರಲ್ಲಿ ಆಹಾರಪದಾರ್ಥ ಎಣ್ಣೆ ದ್ರಾಕ್ಷಾರಸ ಇವುಗಳನ್ನೂ ಗುರಾಣಿಬರ್ಜಿಗಳನ್ನೂ ಸಂಗ್ರಹಿಸಿಟ್ಟನು;


ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.


ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೇದಲ್ಲ.


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.


ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು


ಆಮೇಲೆ ಅವನು ಅಬ್ರಹಾಮನನ್ನು ಕರಿಸಿ - ನೀನು ನಮಗೆ ಮಾಡಿದ್ದೇನು? ನಾನು ಯಾವ ತಪ್ಪು ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ಮಾಡಬಾರದ ಕಾರ್ಯಗಳನ್ನು ನನಗೆ ಮಾಡಿದೆ ಎಂದು ಹೇಳಿ -


ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.


ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು. ಅವರು ಯಾರೊಬ್ಬಾಮನ


ಆದರೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು