Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:24 - ಕನ್ನಡ ಸತ್ಯವೇದವು J.V. (BSI)

24 ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರ್ಯದೇಶವನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:24
16 ತಿಳಿವುಗಳ ಹೋಲಿಕೆ  

ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿದವೋ?


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂದು ಹೇಳಿಸಿದನು.


ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು. ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ - ಅನ್ಯಜನಗಳ ಕಡೆಗೆ ಹೋಗಬೇಡಿರಿ, ಸಮಾರ್ಯರ ಊರೊಳಗೆ ಕಾಲಿಡಬೇಡಿರಿ;


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬೀ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.


ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈ ತಪ್ಪಿಸಿದವೋ?


ಕರ್ಕೆಮೀಷಿನ ಗತಿಯು ಕಲ್ನೋವಿಗೂ ಆಯಿತಲ್ಲವೆ, ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಷ್ಟೆ; ದಮಸ್ಕದ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತಲ್ಲಾ.


ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು.


ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಯೆಹೋವನೇ, ಅಶ್ಶೂರದ ಅರಸರು ಸಕಲಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳುಮಾಡಿ


ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನಲ್ಲಾ; ಒಂದುವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.


ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ನುಡಿಸಿದ ವಾಕ್ಯ.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು