Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:25 - ಕನ್ನಡ ಸತ್ಯವೇದವು J.V. (BSI)

25 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲವಾದದರಿಂದ ಆತನು ಸಿಂಹಗಳನ್ನು ಕಳುಹಿಸಿದನು; ಅವು ಅವರಲ್ಲಿ ಅನೇಕರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರಿಗೆ ಆರಂಭದಲ್ಲಿ ಸರ್ವೇಶ್ವರನಲ್ಲಿ ಭಯಭಕ್ತಿ ಇರಲಿಲ್ಲ. ಆದ್ದರಿಂದ ಸರ್ವೇಶ್ವರ ಸಿಂಹಗಳನ್ನು ಕಳುಹಿಸಿದರು; ಅವು ಅವರಲ್ಲಿ ಅನೇಕರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಅವರು ಯೆಹೋವನನ್ನು ಗೌರವಿಸಲಿಲ್ಲ. ಆದ್ದರಿಂದ ಅವರ ಮೇಲೆ ಆಕ್ರಮಣಮಾಡಲು ಯೆಹೋವನು ಸಿಂಹಗಳನ್ನು ಕಳುಹಿಸಿದನು. ಈ ಸಿಂಹಗಳು ಆ ಜನರಲ್ಲಿ ಕೆಲವರನ್ನು ಕೊಂದುಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ, ಯೆಹೋವ ದೇವರಿಗೆ ಭಯಪಡದ ಕಾರಣ, ಯೆಹೋವ ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದರು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:25
18 ತಿಳಿವುಗಳ ಹೋಲಿಕೆ  

ಆ ಜನಾಂಗಗಳವರು ಯೆಹೋವ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿರುತ್ತಾರೆ.


ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ; ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಧರ್ಮಶಾಸ್ತ್ರಗಳನ್ನು ಅನುಸರಿಸುವದಿಲ್ಲ.


ಅವರು ಯೆಹೋವನ ಭಕ್ತರಾಗಿ ಕನಿಷ್ಠಜನರಲ್ಲಿ ಕೆಲವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.


ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದೇವರಾದ ಯೆಹೋವನ ಭಕ್ತನು ಎಂದು ಹೇಳಿದನು.


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಖಡ್ಗ ಕ್ಷಾಮ ದುಷ್ಟಮೃಗ ವ್ಯಾಧಿ ಎಂಬೀ ನಾಲ್ಕು ಬಾಧೆಗಳನ್ನು ಯೆರೂಸಲೇವಿುನ ಮೇಲೆ ಒಟ್ಟಿಗೆ ತಂದು ಜನಪಶುಗಳನ್ನು ನಿರ್ಮೂಲಮಾಡುವಾಗ ಹೇಳತಕ್ಕದ್ದೇನು!


ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಪಡಿಸಿ ಹಾಳುಮಾಡಿ ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ


ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು, ಅಂದರೆ ಕಡಿಯುವದಕ್ಕೆ ಖಡ್ಗವನ್ನು, ಸೀಳುವದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವದಕ್ಕೆ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನೇವಿುಸುವೆನು ಎಂಬದು ಯೆಹೋವನಾದ ನನ್ನ ಮಾತು.


ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವಭಕ್ತಿಯನ್ನು ಬೋಧಿಸಿದನು.


ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.


ಆಗ ಪ್ರವಾದಿಯು ಅವನಿಗೆ - ನೀನು ಯೆಹೋವನ ಮಾತನ್ನು ಕೇಳದೆಹೋದದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೆ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವದು ಅಂದನು. ಅವನು ಇವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದುಹಾಕಿತು.


ದೇವರ ಮನುಷ್ಯನು ಸ್ವಲ್ಪ ದೂರ ಹೋದನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.


ರೂಬೇನ್ಯರೇ, ಗಾದ್ಯರೇ, ಯೆಹೋವನು ನಮಗೂ ನಿಮಗೂ ನಡುವೆ ಯೊರ್ದನ್ ಹೊಳೆಯನ್ನು ಮೇರೆಯಾಗಿಟ್ಟಿದ್ದಾನೆ. ಆತನಲ್ಲಿ ನಿಮಗೇನೂ ಪಾಲಿಲ್ಲ ಎಂದು ಹೇಳಿ ಅವರನ್ನು ದೇವಭಕ್ತಿಯಿಂದ ತೊಲಗಿಸಿ ಬಿಟ್ಟಾರು ಎಂಬ ಭಯದಿಂದ ನಾವು -


ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮನ್ನು ಸಂತಾನವಿಲ್ಲದವರನ್ನಾಗಿ ಮಾಡುವವು; ನಿಮ್ಮ ಪಶುಗಳನ್ನು ಕೊಲ್ಲುವವು; ನಿಮ್ಮನ್ನು ಸ್ವಲ್ಪ ಮಂದಿಯನ್ನಾಗಿ ಮಾಡುವವು; ನಿಮ್ಮ ದಾರಿಗಳು ಹಾಳುಬೀಳುವವು.


ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ - ನೀನು ಸಮಾರ್ಯಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದದರಿಂದ ಅಲ್ಲಿನ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿರುತ್ತಾನೆ ಎಂದು ತಿಳಿಸಿದರು.


ದೀಮೋನಿನ ನೀರೆಲ್ಲಾ ರಕ್ತಮಯವಾಯಿತು; ಮತ್ತು ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು, ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು