Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:39 - ಕನ್ನಡ ಸತ್ಯವೇದವು J.V. (BSI)

39 ನಿಮ್ಮ ದೇವರಾಗಿರುವ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ತಪ್ಪಿಸುವೆನು ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನೀವು ನಿಮ್ಮ ದೇವರಾದ ಯೆಹೋವನನ್ನು ಮಾತ್ರ ಆರಾಧಿಸಬೇಕು. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಭಯಪಡಿರಿ. ಆಗ ಅವರು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವರು,” ಎಂದು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:39
12 ತಿಳಿವುಗಳ ಹೋಲಿಕೆ  

ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ತಲತಲಾಂತರದವರೆಗೂ ಇರುವದು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.


ಆದದರಿಂದ ನೀನು ಅವರನ್ನು ಬಾಧಿಸುವ ವಿರೋಧಿಗಳ ಕೈಗೆ ಒಪ್ಪಿಸಿದಿ. ಅವರು ಆ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಬಿಡಿಸಿದಿ.


ನಿಮ್ಮನ್ನು ಮಹಾಶಕ್ತಿ ಭುಜಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತದೇಶದಿಂದ ಕರಕೊಂಡುಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ ನನಗೊಬ್ಬನಿಗೇ ಕೈ ಮುಗಿದು ಯಜ್ಞವರ್ಪಿಸಬೇಕು,


ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಂಡು ಆತನನ್ನು ಸತ್ಯದಿಂದಲೂ ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ಆತನು ನಮ್ಮ ಪಿತೃಗಳಿಗೆ ದಯೆಯನ್ನು ತೋರಿಸುವವನಾಗಿಯೂ ನಮ್ಮ ಮೂಲ ಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಸಿಕೊಳ್ಳುವವನಾಗಿಯೂ ಇದ್ದು ನಮ್ಮ ವೈರಿಗಳಿಂದಲೂ ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ.


ಅನ್ಯದೇವತೆಗಳನ್ನು ಪೂಜಿಸಬಾರದು, ನನ್ನ ನಿಬಂಧನೆಯನ್ನು ಮರೆತು ಅನ್ಯದೇವತೆಗಳನ್ನು ಪೂಜಿಸಬಾರದು.


ಅವರು ಅದನ್ನು ಲಕ್ಷಿಸದೆ ತಮ್ಮ ಮುಂಚಿನ ಪದ್ಧತಿಗಳನ್ನೇ ಅನುಸರಿಸಿದರು.


ಆಗ ಸಮುವೇಲನು ಅವರಿಗೆ - ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು