Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:19 - ಕನ್ನಡ ಸತ್ಯವೇದವು J.V. (BSI)

19 ರಬ್ಷಾಕೆಯು ಅವರಿಗೆ - ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಬ್ಷಾಕೆಯು ಅವರಿಗೆ, ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, “ನಿನ್ನ ಭರವಸಕ್ಕೆ ಯಾವ ಆಧಾರವುಂಟು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ರಬ್ಷಾಕೆಯು ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ: ‘ನಿನ್ನ ಭರವಸೆಗೆ ಆಧಾರವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೇನಾಧಿಪತಿಗಳಲ್ಲಿ ಒಬ್ಬನಾದ ರಬ್ಷಾಕೆಯು ಅವರಿಗೆ, “ಅಶ್ಶೂರದ ಮಹಾರಾಜನು ಹಿಜ್ಕೀಯನಿಗೆ ತಿಳಿಸುವುದೇನೆಂದರೆ: ‘ನಿನ್ನ ನಂಬಿಕೆಗೆ ಆಧಾರವು ಎಲ್ಲಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:19
16 ತಿಳಿವುಗಳ ಹೋಲಿಕೆ  

ರಬ್ಷಾಕೆಯು ಅವರಿಗೆ - ನೀವು ಹೋಗಿ ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ - ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಅವರ ಮುಖಾಂತರವಾಗಿ ಅವನಿಗೆ - ನೀನು ನಂಬುವ ದೇವರು - ನಾನು ಯೆರೂಸಲೇಮನ್ನು ಅಶ್ಶೂರದ ಅರಸನ ಕೈಗೆ ಒಪ್ಪಿಸುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬೀ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.


[ಹಿಜ್ಕೀಯನೇ,] ನೀನು ನಂಬುವ ದೇವರು - ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ಒಂದು ವೇಳೆ ನೀನು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾ ಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳು ಮಾಡಿದನಲ್ಲಾ!


ಮಹನೀಯರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸಿ ನನ್ನನ್ನು ಅವಮಾನ ಪಡಿಸುವಿರಿ? ಯಾಕೆ ನಿರರ್ಥಕವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ.


ಒಂದು ವೇಳೆ ನೀವು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಯೆರೂಸಲೇವಿುನ ಯಜ್ಞವೇದಿಯ ಮುಂದೆಯೇ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇವಿುಗೆ ಬಂದು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು.


ಇವನು ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು