4 ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;
4 ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.
4 ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
4 ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.
ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
ಇವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ ಪೂಜಾಸ್ಥಳಗಳನ್ನು ಹಾಳು ಮಾಡಲಿಲ್ಲ; ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಸುಡುತ್ತಾ ಇದ್ದರು.
ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟದ್ದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹ ಸ್ತಂಭವು ಕಡಿಯಲ್ಪಟ್ಟದ್ದನ್ನೂ ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು
ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ ಏಳು ವರುಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡುಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹ ಸ್ತಂಭವನ್ನು ಕಡಿದುಹಾಕಿ
ಆದದರಿಂದ ನೀವು ಹೀಗೆ ಮಾಡಬೇಕು - ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲಿನ ಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು.
ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಡಲಿಲ್ಲವಾದದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಲನ್ನು ಇಡಿಸಿದವನು ಇವನೇ.
ತರುವಾಯ ಅವನು ಮಹಾಯಾಜಕನಾದ ಹಿಲ್ಕೀಯನು, ಎರಡನೆಯ ತರಗತಿಯ ಯಾಜಕರು, ದ್ವಾರಪಾಲಕರು ಇವರ ಮುಖಾಂತರವಾಗಿ ಬಾಳ್, ಅಶೇರ ಎಂಬ ದೇವತೆಗಳಿಗೋಸ್ಕರವೂ ಆಕಾಶ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು ಬೆಟ್ಟವನ್ನು ಹತ್ತದೆಹೋಗಲಾಗಿ ನಾನು ಯೆಹೋವನಿಗೂ ನಿಮಗೂ ನಡುವೆ ನಿಂತು ಆತನು ಆಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನಂದರೆ -