Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ದಯವಿಟ್ಟು ನನ್ನ ಮಾತುಗಳನ್ನು ಆಲಿಸು! ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು, ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪನಾದ ದೇವರನ್ನು ನಿಂದಿಸಿ ಕಳುಹಿಸಿರುವ ಈ ವಾಕ್ಯವನ್ನು ಕೇಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:16
11 ತಿಳಿವುಗಳ ಹೋಲಿಕೆ  

ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.


ಕಿವಿಗೊಟ್ಟು ಕೇಳಿ ಬೇಗ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ ದುರ್ಗಸ್ಥಾನವೂ ಆಗಿರು.


ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.


ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.


ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳುಪ್ರದೇಶಗಳನ್ನೂ ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೆಂತಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆಮಾಡುತ್ತಿದ್ದೇವೆ.


ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.


ಐಗುಪ್ತದೇಶದ ಸರ್ವೈಶ್ವರ್ಯಕ್ಕಿಂತಲೂ ಕ್ರಿಸ್ತನ ನಿವಿುತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು; ಯಾಕಂದರೆ ಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.


ಸ್ವಾವಿುಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ ಏಳರಷ್ಟು ಪ್ರತಿಫಲವು ತುಂಬಿರುವಂತೆಮಾಡು.


ಯೆಹೋವನೇ, ಅಶ್ಶೂರದ ಅರಸರು ದೇಶಜನಾಂಗಗಳನ್ನು ಹಾಳುಮಾಡಿ


ದೇವರೇ, ಎದ್ದು ನಿನ್ನ ನ್ಯಾಯವನ್ನು ನಡಿಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವದನ್ನು ಜ್ಞಾಪಿಸಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು