Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:35 - ಕನ್ನಡ ಸತ್ಯವೇದವು J.V. (BSI)

35 ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರಮಂದಿ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡುವಲ್ಲಿ ಪಾಳೆಯತುಂಬಾ ಹೆಣಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆ ರಾತ್ರಿ ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:35
24 ತಿಳಿವುಗಳ ಹೋಲಿಕೆ  

ದೇವದೂತನು ಯೆರೂಸಲೇಮನ್ನೂ ಸಂಹರಿಸುವದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕದೂತನಿಗೆ - ಈಗ ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸಿ ಢಮ್ಮನೆ ಬೀಳಿಸುವನು; ಉನ್ನತ ವೃಕ್ಷಗಳು ಕಡಿದುಹೋಗುವವು,


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವದನ್ನೂ ಚಾಚಿದ ಕೈಯಲ್ಲಿ ಯೆರೂಸಲೇವಿುಗೆ ವಿರೋಧವಾಗಿ ಹಿರಿದ ಕತ್ತಿಯಿರುವದನ್ನೂ ಕಂಡಾಗ ಅವನೂ ಹಿರಿಯರೂ ಗೋಣೀತಟ್ಟನ್ನು ಹೊದ್ದುಕೊಂಡವರಾಗಿ ಬೋರ್ಲಬಿದ್ದರು;


ಮೂರುವರುಷಗಳ ಕಾಲ ಬರವು ಉಂಟಾಗಬೇಕೋ, ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಕತ್ತಿಗೆ ಬಲಿಯಾಗುವದು ಬೇಕೋ, ಇಲ್ಲವೆ ಇಸ್ರಾಯೇಲ್ಯರ ಸಮಸ್ತಪ್ರಾಂತಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರಕದೂತನಿಂದುಂಟಾಗುವ ಮೂರು ದಿನಗಳ ಘೋರ ವ್ಯಾಧಿ ರೂಪವಾದ ಯೆಹೋವನ ಕತ್ತಿಯುಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ ಎಂಬದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಎಂದು ಹೇಳಿದನು.


ಯೆಹೋವನು ಐಗುಪ್ತ್ಯರನ್ನು ಹತಮಾಡುವದಕ್ಕೆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೇಬಾಗಲಿನ ಮೇಲಣ ಪಟ್ಟಿಯಲ್ಲಿಯೂ ಎರಡು ನಿಲುವು ಕಂಬಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವನು. ನಿಮ್ಮ ಪ್ರಾಣ ತೆಗೆಯುವದಕ್ಕೆ ಸಂಹಾರಕನನ್ನು ನಿಮ್ಮ ಮನೆಗಳಲ್ಲಿ ಬರಗೊಡಿಸುವದೇ ಇಲ್ಲ.


ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಅಂಜ ಕಾರಣವಿಲ್ಲ.


ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ನಾನು ಕೈಯೆತ್ತಿ ನಿನ್ನನ್ನೂ ನಿನ್ನ ಪ್ರಜೆಗಳನ್ನೂ ಅಂಟುರೋಗದಿಂದ ಸಾಯಿಸಬಹುದಾಗಿತ್ತು; ಆಗ ನೀನು ಈವರೆಗೆ ಭೂವಿುಯಲ್ಲಿ ಇರದಂತೆ ನಿರ್ಮೂಲವಾಗುತ್ತಿದ್ದಿ.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ಆದದರಿಂದ ನಾನು ಅವನ ಮೇಲೆ [ಭಯದ] ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಸಂಹೃತನಾಗುವಂತೆ ಮಾಡುವೆನು ಎಂಬದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ ಎಂದು ಉತ್ತರಕೊಟ್ಟನು.


ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು