Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:19 - ಕನ್ನಡ ಸತ್ಯವೇದವು J.V. (BSI)

19 ಯೆರಿಕೋವಿನ ಜನರು ಎಲೀಷನಿಗೆ - ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೇದಾಗಿದೆ; ಆದರೆ ನೀರು ಕೆಟ್ಟದ್ದಾಗಿರುವದರಿಂದ ಬಂಜೆತನ ಹೆಚ್ಚು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆರಿಕೋವಿನ ಜನರು ಎಲೀಷನಿಗೆ, “ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೆರಿಕೋವಿನ ಜನರು ಎಲೀಷ, “ನಮ್ಮ ಒಡೆಯರಾದ ನಿಮಗೆ ಗೊತ್ತಿರುವಂತೆ ಈ ಊರು ಕಟ್ಟಿಸಿರುವ ಸ್ಥಳ ಚೆನ್ನಾಗಿದೆ. ಆದರೆ ನೀರು ಕೆಟ್ಟದ್ದು. ಆದುದರಿಂದ ಗರ್ಭಪಾತ ಹೆಚ್ಚು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಗರದ ಜನರು ಎಲೀಷನಿಗೆ, “ಸ್ವಾಮೀ, ಈ ನಗರವು ಒಳ್ಳೆಯ ಸ್ಥಳದಲ್ಲಿದೆಯೆಂಬುದನ್ನು ನೀನು ನೋಡುತ್ತಿರುವೆ. ಆದರೆ ನೀರು ತುಂಬಾ ಕೆಟ್ಟಿದೆ. ಆ ಕಾರಣದಿಂದಲೇ ಈ ಭೂಮಿಯಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಪಟ್ಟಣದ ಮನುಷ್ಯರು ಎಲೀಷನಿಗೆ, “ಈ ಪಟ್ಟಣದ ಸ್ಥಳವು ಒಳ್ಳೆಯದಾಗಿದೆ. ನಮ್ಮ ಯಜಮಾನನೇ, ನೋಡು ನಿನಗೆ ಕಾಣುವುದು. ಆದರೆ ನೋಡು ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:19
16 ತಿಳಿವುಗಳ ಹೋಲಿಕೆ  

ನಿಮ್ಮ ದೇಶದಲ್ಲಿ ಗರ್ಭಸ್ರಾವವಾಗಲಿ ಬಂಜೇತನವಾಗಲಿ ಇರುವದೇ ಇಲ್ಲ; ನಿಮಗೆ ಸಂಪೂರ್ಣವಾದ ಆಯುಸ್ಸನ್ನು ಕೊಡುವೆನು.


ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮಗೆ ಸಂತಾನಪಶುವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವನು.


ಆಗ ಆರೋನನು ಮೋಶೆಗೆ - ಅಯ್ಯಾ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದರೂ ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ;


ತರುವಾಯ ಮಾರಾ ಎಂಬ ಸ್ಥಳವನ್ನು ಸೇರಿದರು; ಆದರೆ ಆ ಸ್ಥಳದ ನೀರು ಕಹಿಯಾಗಿದ್ದದರಿಂದ ಅವರಿಗೆ ಅದನ್ನು ಕುಡಿಯುವದಕ್ಕಾಗದೆ ಹೋಯಿತು. ಅದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.


ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೊಲನ್ನು ತೆಗೆದುಕೊಂಡು ಐಗುಪ್ತ ದೇಶದಲ್ಲಿರುವ ಹೊಳೆ ಕಾಲುವೆ ಕೆರೆ ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು ಎಂದು ಹೇಳಬೇಕು; ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವದು; ಐಗುಪ್ತ ದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರೂ ರಕ್ತವಾಗುವದು ಅಂದನು.


ಇವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರೀಮಗನಾದ ಅಬೀರಾಮನನ್ನೂ ಬಾಗಲುಗಳನ್ನಿಡುವಾಗ ಕಿರೀಮಗನಾದ ಸೆಗೂಬನನ್ನೂ ಕಳಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.


(ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತಿಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.)


ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಫಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗನಮಸ್ಕಾರ ಮಾಡಿ - ನೀನು ನನ್ನ ಸ್ವಾವಿುಯಾದ ಎಲೀಯನೋ ಎಂದು ಕೇಳಲು ಅವನು -


ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ - ಈ ಯೆರಿಕೋ ಪಟ್ಟಣವನ್ನು ಕಟ್ಟುವದಕ್ಕೆ ಕೈ ಹಚ್ಚುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರೀ ಮಗನನ್ನೂ ಬಾಗಲುಗಳನ್ನಿಡುವಾಗ ಕಿರೀ ಮಗನನ್ನೂ ಕಳೆದುಕೊಳ್ಳಲಿ ಎಂದು ಹೇಳಿದನು.


ಇದೂ ಇದರಲ್ಲಿರುವದೆಲ್ಲವೂ ಕೇವಲ ಯೆಹೋವನ ಸೊತ್ತೇ ಎಂದು ತಿಳಿಯಿರಿ. ಸೂಳೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ; ನಾವು ಕಳುಹಿಸಿದ ದೂತರನ್ನು ಅವಳು ಅಡಗಿಸಿಟ್ಟಳಲ್ಲಾ.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ಪ್ರಸಂಗದಲ್ಲಿಯೂ ಉಪದೇಶದಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾವಿುಯಾದ ನಿನಗೆ ತಿಳಿಸಲ್ಪಡಲಿಲ್ಲವೋ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು; ಅವನು ಅವರಿಗೆ - ಹೋಗಬೇಡಿರೆಂದು ನಾನು ಹೇಳಲಿಲ್ಲವೋ ಅಂದನು.


ಆಗ ಎಲೀಷನು ಅವರಿಗೆ - ಒಂದು ಹೊಸ ಮಡಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದುಕೊಡಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು