Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:24 - ಕನ್ನಡ ಸತ್ಯವೇದವು J.V. (BSI)

24 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಎಲೀಷನು ಅವರ ಕಡೆಗೆ ತಿರುಗಿ, ಸರ್ವೇಶ್ವರನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣುಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಸೀಳಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:24
28 ತಿಳಿವುಗಳ ಹೋಲಿಕೆ  

ಆಗ ಪೇತ್ರನು ಆಕೆಗೆ - ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವದಕ್ಕೆ ಯಾಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಹೂಣಿಟ್ಟವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು ಎಂದು ಹೇಳಿದನು.


ಈ ಮಾತುಗಳನ್ನು ಅನನೀಯನು ಕೇಳಿದ ಕೂಡಲೆ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಹಿಡಿಯಿತು.


ಯೆಹೋವನು ಇಂತೆನ್ನುತ್ತಾನೆ - ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು, ನಿನ್ನ ಗಂಡುಹೆಣ್ಣುಮಕ್ಕಳು ಖಡ್ಗದಿಂದ ಹತರಾಗುವರು, ನಿನ್ನ ದೇಶವನ್ನು [ಶತ್ರುಗಳು] ನೂಲೆಳೆದು ಭಾಗಿಸಿಕೊಳ್ಳುವರು, ನೀನಂತು ಅಪವಿತ್ರ ದೇಶದಲ್ಲಿ ಸಾಯುವಿ, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂಬದಾಗಿ ಹೇಳಿದನು.


ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಬಗಿದುಹಾಕುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಸೀಳಿಬಿಡುವವು.


ಆದರೆ ಪೇತ್ರನು ಅವನಿಗೆ - ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?


ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಸಿಕೊಂಡು ಆತನಿಗೆ - ಗುರುವೇ, ಇಗೋ, ನೀನು ಶಾಪಕೊಟ್ಟ ಅಂಜೂರದ ಮರವು ಒಣಗಿಹೋಗಿದೆ ಎಂದು ಹೇಳಿದ್ದಕ್ಕೆ


ಆಗ ಯೇಸು ಆ ಮರಕ್ಕೆ - ಇನ್ನು ಮೇಲೆ ಒಬ್ಬರೂ ನಿನ್ನಲ್ಲಿ ಹಣ್ಣನ್ನು ಎಂದೆಂದಿಗೂ ತಿನ್ನದ ಹಾಗಾಗಲಿ ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿದರು.


ಅವರ ಮನಸ್ಸನ್ನು ಮಂಕುಮಾಡುವಿ, ಅವರಿಗೆ ನಿನ್ನ ಶಾಪವು ತಗಲಲಿ!


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನಿನ್ನನ್ನು ಭೂವಿುಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರುಷ ಸಾಯುವಿ ಎಂದು ಹೇಳಿದನು.


ಆಗ ಪ್ರವಾದಿಯು ಅವನಿಗೆ - ನೀನು ಯೆಹೋವನ ಮಾತನ್ನು ಕೇಳದೆಹೋದದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೆ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವದು ಅಂದನು. ಅವನು ಇವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದುಹಾಕಿತು.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ದೇವರ ಮನುಷ್ಯನು ಸ್ವಲ್ಪ ದೂರ ಹೋದನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.


ನಿನ್ನ ತಂದೆಯೂ ಅವನ ಜನರೂ ಶೂರರಾಗಿದ್ದಾರೆಂದೂ ಈಗ ಅವರು ಮರಿಯನ್ನು ಕಳಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದೂ ನಿನಗೆ ಗೊತ್ತುಂಟಲ್ಲಾ; ಇದಲ್ಲದೆ ಅವನು ಯುದ್ಧನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವದಿಲ್ಲ.


ಶೆಕೆವಿುನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ ಅಂದನು.


ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಶಿಕ್ಷೆ ಮಾಡುವದಕ್ಕೆ ಸಿದ್ಧರಾಗಿದ್ದೇವೆ.


ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಮೂರ್ಖತನದಲ್ಲಿ ಮುಣುಗಿರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.


ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆವಿುನವರನ್ನೂ ವಿುಲ್ಲೋ ಕೋಟೆಯವರನ್ನೂ ದಹಿಸಿ ಬಿಡಲಿ; ಶೆಕೆವಿುನವರಿಂದಲೂ ವಿುಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿ ಬಿಡಲಿ.


ಎಲೀಷನು ಅಲ್ಲಿಂದ ಕರ್ಮೆಲ್‍ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಬಂದನು.


ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮನ್ನು ಸಂತಾನವಿಲ್ಲದವರನ್ನಾಗಿ ಮಾಡುವವು; ನಿಮ್ಮ ಪಶುಗಳನ್ನು ಕೊಲ್ಲುವವು; ನಿಮ್ಮನ್ನು ಸ್ವಲ್ಪ ಮಂದಿಯನ್ನಾಗಿ ಮಾಡುವವು; ನಿಮ್ಮ ದಾರಿಗಳು ಹಾಳುಬೀಳುವವು.


ಧರ್ಮನಿಂದಕರಿಗೆ [ದಂಡನೆಯ] ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು