Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:7 - ಕನ್ನಡ ಸತ್ಯವೇದವು J.V. (BSI)

7 ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರನ್ನು ಹಿಂಬಾಲಿಸಿಕೊಂಡು ಬಂದ ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಅಲ್ಲಿದ್ದರು. ಎಲೀಯ ಮತ್ತು ಎಲೀಷರು ಜೋರ್ಡನ್ ನದಿಯ ಹತ್ತಿರ ನಿಂತುಕೊಂಡರು. ಆ ಐವತ್ತು ಮಂದಿ ಜನರು ಎಲೀಯ ಮತ್ತು ಎಲೀಷರಿಗಿಂತ ಬಹುದೂರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:7
12 ತಿಳಿವುಗಳ ಹೋಲಿಕೆ  

ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು ಕಳುಹಿಸುವದಕ್ಕೆ ಅಪ್ಪಣೆಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಎಲೀಯನನ್ನು ಕಾಣದೆ


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾವಿುಯಾದ ನಿನಗೆ ತಿಳಿಸಲ್ಪಡಲಿಲ್ಲವೋ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.


ಅನಂತರ ಅವರು ಅವನಿಗೆ - ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ; ನಿನ್ನ ಯಜಮಾನನನ್ನು ಹುಡುಕಹೋಗುವದಕ್ಕೆ ಅವರಿಗೆ ಅಪ್ಪಣೆಯಾಗಲಿ. ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು ಎಂದು ಹೇಳಿದರು; ಅವನು ಅವರಿಗೆ - ನೀವು ಕಳುಹಿಸಬೇಡಿರಿ ಅಂದನು.


ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ಅವನು - ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದದರಿಂದ ಅವರಿಗೋಸ್ಕರ ಬೇಗನೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತುಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬದಾಗಿ ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು ಎಂದು ಉತ್ತರಕೊಟ್ಟನು.


ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ - ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರವ ಈ ಸ್ಥಳವು ಬಲು ಇಕ್ಕಟ್ಟಾಗಿದೆ.


ಪ್ರವಾದಿಯಾದ ಎಲೀಷನು ಪ್ರವಾದಿ ಮಂಡಲಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ - ನಡುಕಟ್ಟಿ ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗು.


ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ - ನಾನು ಪ್ರವಾದಿಯಲ್ಲ, ಪ್ರವಾದಿ ಮಂಡಲಿಗೆ ಸೇರಿದವನೂ ಅಲ್ಲ, ನಾನು ಗೊಲ್ಲನು, ಅತ್ತಿಹಣ್ಣು ಕೀಳುವವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು