Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:18 - ಕನ್ನಡ ಸತ್ಯವೇದವು J.V. (BSI)

18 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮನಸ್ಸೆಯು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮನಸ್ಸೆಯನ್ನು “ಉಜ್ಜನ ವನ”ದಲ್ಲಿ ಸಮಾಧಿಮಾಡಿದರು. ಈ ವನವು ಅವನ ಸ್ವಂತ ಮನೆಯಲ್ಲಿತ್ತು. ಮನಸ್ಸೆಯ ನಂತರ ಅವನ ಮಗನಾದ ಆಮೋನನು ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು, ಅವನ ಅರಮನೆಯ ತೋಟವಾದ ಉಜ್ಜನ ತೋಟದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:18
13 ತಿಳಿವುಗಳ ಹೋಲಿಕೆ  

ಮನಸ್ಸೆಯು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.


ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನಿಗೆ ಬದಲಾಗಿ ಅವನ ಮಗನಾದ ಯೋಷೀಯನು ಅರಸನಾದನು.


ಇವನನ್ನು ಯೆರೂಸಲೇವಿುನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಟು ಮಣ್ಣುಪಾಲುಮಾಡುವರು.


ಹಿಜ್ಕೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬಶ್ಮಶಾನ ಭೂವಿುಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.


ಅವನು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್‍ರಾಜಶ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗನಾದ ಹಿಜ್ಕೀಯನು ಅರಸನಾದನು.


ಇವರು ಅವನನ್ನು ಬಿಟ್ಟುಹೋದಕೂಡಲೆ ಅವನ ಸೇವಕರು ಯಾಜಕನಾದ ಯೆಹೋಯಾದನ ಮಗನ ವಧೆಯ ನಿವಿುತ್ತ ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಕಠಿನ ರೋಗದಲ್ಲಿದ್ದ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ.


ಅವನು ಇಸ್ರಾಯೇಲ್ಯರ ವಿಷಯದಲ್ಲಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು.


ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು. ಅವನು ತೀರಿಹೋದಾಗ ಅವನನ್ನು ಯಾರೂ ಹಂಬಲಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ.


ಸಮುವೇಲನು ಮೃತಿಹೊಂದಿದನು. ಇಸ್ರಾಯೇಲ್ಯರೆಲ್ಲರೂ ಕೂಡಿ ಬಂದು ಅವನಿಗೋಸ್ಕರ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಅರಣ್ಯಕ್ಕೆ ಹೋದನು.


ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಲ್ಲಿ ಯೆಹೋವನ ವಾಕ್ಯವು ಇವನಿಗೆ ಒದಗಿತು.


ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.


ಆಮೋನನು ಅರಸನಾದಾಗ ಇಪ್ಪತ್ತೆರಡು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಎರಡು ವರುಷ ಆಳಿದನು. ಯೊಟ್ಟಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.


ಇವನ ಮಗನು ಮನಸ್ಸೆ; ಇವನ ಮಗನು ಆಮೋನ್; ಇವನ ಮಗನು ಯೋಷೀಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು