Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:17 - ಕನ್ನಡ ಸತ್ಯವೇದವು J.V. (BSI)

17 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿ ಆರಿ ಹೋಗುವದೇ ಇಲ್ಲ ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:17
33 ತಿಳಿವುಗಳ ಹೋಲಿಕೆ  

ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ನಿನ್ನ ಮೂರ್ತಿಗಳನ್ನೂ ಕಲ್ಲುಕಂಬಗಳನ್ನೂ ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು, ನಿನ್ನ ಕೈ ರೂಪಿಸಿದ್ದನ್ನು ಇನ್ನು ಪೂಜಿಸದಿರುವಿ.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇವಿುನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ ಆ ದಿನವನ್ನು ನನ್ನ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇವಿುನ ಉಪ್ಪರಿಗೆಗಳನ್ನು ದಹಿಸಿಬಿಡುವದು, ಆರುವದೇ ಇಲ್ಲ.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡಿಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆಯಲ್ಲಿ ನಡೆಯುವನು. ಆದರೂ ನಾನು ಅವರನ್ನು ಶಿಕ್ಷಿಸುವಾಗ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು ಅಂದುಕೊಳ್ಳುವರು.


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರೋಧವಾಗಿ ಪ್ರಯೋಗಿಸುವೆನು.


ಅನ್ಯದೇವತೆಗಳಿಗೆ ಧೂಪಹಾಕುವದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಯೆಹೋವನನ್ನು ರೇಗಿಸಿದನು.


ಯೆಹೋವನು ನಿಮ್ಮ ಪಿತೃಗಳ ಮೇಲೆ ಬಹುಕೋಪಗೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು