Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:5 - ಕನ್ನಡ ಸತ್ಯವೇದವು J.V. (BSI)

5 ಆಲಯದ ಕೆಲಸಮಾಡಿಸುವ ಮೊಕ್ತೇಸರರಿಗೆ ಅದನ್ನು ಒಪ್ಪಿಸು ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5-6 ಮೇಸ್ತ್ರಿಗಳು ಅದನ್ನು ಸರ್ವೇಶ್ವರನ ಆಲಯದ ದುರಸ್ತುಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ಯಾಜಕರು ದೇವಾಲಯದಲ್ಲಿ ಕೆಲಸದ ಉಸ್ತುವಾರಿಯನ್ನು ನೋಡಿಕೊಳ್ಳುವ ಮುಖ್ಯಸ್ಥರಿಗೆ ಕೊಡಲಿ. ಯಾಜಕರು ದೇವಾಲಯವನ್ನು ದುರಸ್ತಿ ಮಾಡುವ ಕೆಲಸಗಾರರಿಗೆ ಈ ಹಣವನ್ನು ವಿನಿಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಅದನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:5
8 ತಿಳಿವುಗಳ ಹೋಲಿಕೆ  

ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿರುತ್ತದೆಂದು ನೋಡಿ ಅದನ್ನು ಸರಿಮಾಡುವದಕ್ಕೋಸ್ಕರ ವಿನಿಯೋಗಿಸಿರಿ; ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು ಎಂದು ಆಜ್ಞಾಪಿಸಿದನು.


ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಅವನ ಮಕ್ಕಳ ವಿವರವೂ ಅವನಿಗೆ ವಿರುದ್ಧವಾಗಿ ಹೇಳಲ್ಪಟ್ಟ ಅನೇಕ ದೈವೋಕ್ತಿಗಳೂ ದೇವಾಲಯದ ಜೀರ್ಣೋದ್ಧಾರವೃತ್ತಾಂತವೂ ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.


ಅತಿ ದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗೋಸ್ಕರ ಕೊಟ್ಟುಬಿಟ್ಟರಲ್ಲಾ ಎಂದು ಹೇಳಿದನು.


ಮೊಕ್ತೇಸರರು ಅದನ್ನು ಯೆಹೋವನ ಆಲಯದ ಜೀರ್ಣೋದ್ಧಾರಮಾಡುವ ಬಡಗಿ ಶಿಲ್ಪಿ ಉಪ್ಪಾರ ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವದಕ್ಕಾಗಿಯೂ ಉಪಯೋಗಿಸಲಿ.


ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವದಕ್ಕೋಸ್ಕರ ಅವನಿಗೆ ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು