Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:12 - ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್‍ಹಳ್ಳದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ ಜುದೇಯದ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಬಲಿಪೀಠಗಳನ್ನು ಹಾಗು ಮನಸ್ಸೆಯು ಸರ್ವೇಶ್ವರನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಬಲಿಪೀಠಗಳನ್ನು ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಆ ಯಜ್ಞವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿದ್ರೋನ್ ಕಣಿವೆಗೆ ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:12
15 ತಿಳಿವುಗಳ ಹೋಲಿಕೆ  

ಮಾಳಿಗೆಗಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆ ಪೂಜಿಸುವವರನ್ನೂ ಯೆಹೋವನ ಭಕ್ತರೆಂದು ಪ್ರತಿಜ್ಞೆಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ


ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು.


ಸರ್ವನಕ್ಷತ್ರಮಂಡಲಕ್ಕೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿದನು.


ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಕ್ಕೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿದನು.


ಅನ್ಯದೇವತಾಪ್ರತಿಮೆಗಳನ್ನೂ ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗಿಸಿ ಯೆಹೋವಮಂದಿರವಿರುವ ಗುಡ್ಡದಲ್ಲಿಯೂ ಯೆರೂಸಲೇವಿುನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.


ಯೆಹೋವನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್‍ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಡಿಸಿ ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಕನಿಷ್ಠಜನರ ಶ್ಮಶಾನದಲ್ಲಿ ಹಾಕಿಸಿದನು.


ತರುವಾಯ ಅವನು ಮಹಾಯಾಜಕನಾದ ಹಿಲ್ಕೀಯನು, ಎರಡನೆಯ ತರಗತಿಯ ಯಾಜಕರು, ದ್ವಾರಪಾಲಕರು ಇವರ ಮುಖಾಂತರವಾಗಿ ಬಾಳ್, ಅಶೇರ ಎಂಬ ದೇವತೆಗಳಿಗೋಸ್ಕರವೂ ಆಕಾಶ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.


ಆಗ ಬೂದಿ ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡದು, ಕೆಡವಲ್ಪಡದು.


ಇವನ ತಾಯಿಯಾದ ಮಾಕಳು ಅಶೇರದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿದು ಕಿದ್ರೋನ್‍ಹಳ್ಳದ ಹತ್ತಿರ ಸುಡಿಸಿದನು.


ಅಲ್ಲಿನ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.


ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕಾಗಿ ಆರಿಸಿಕೊಂಡ ಯೆರೂಸಲೇವಿುನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ


ಅರಸನಾದ ಆಸನ ತಾಯಿ ಮಾಕಳು ಅಶೇರದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದದರಿಂದ ಅವನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.


ನಾನು ಯೆಹೂದದ ಮೇಲೂ ಯೆರೂಸಲೇವಿುನವರೆಲ್ಲರ ಮೇಲೂ ಕೈಯೆತ್ತಿ ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮಮಾಡುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು