Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:6 - ಕನ್ನಡ ಸತ್ಯವೇದವು J.V. (BSI)

6 ಯೆಹೋವನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್‍ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಡಿಸಿ ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಕನಿಷ್ಠಜನರ ಶ್ಮಶಾನದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿ ಅದನ್ನು ಸುಡಿಸಿ, ಪುಡುಪುಡಿಮಾಡಿಸಿ, ಆ ಪುಡಿಯನ್ನು ಸಾರ್ವಜನಿಕ ಸ್ಮಶಾನದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:6
20 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಬಾಳ್‍ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಹಾಳು ಮಾಡಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಅಶೇರಸ್ತಂಭ ಕೆತ್ತಿದ ಮತ್ತು ಎರಕದ ವಿಗ್ರಹ ಇವುಗಳನ್ನು ಒಡಿಸಿ ಪುಡಿಪುಡಿಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ದೂಳನ್ನು ಚೆಲ್ಲಿಸಿದನು.


ಇದಲ್ಲದೆ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.


ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನೂ ಎತ್ತರವಾದ ಗುಡ್ಡಗಳನ್ನೂ ಕಂಡಾಗೆಲ್ಲಾ ಅವರ ಯಜ್ಞವೇದಿಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ಜ್ಞಾಪಿಸಿಕೊಳ್ಳುವರು.


ತಾನು ಮಾಡಿಸಿದ ಅಶೇರವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವದಾದರೆ


ಇದಲ್ಲದೆ ಬಾಳನ ವಿಗ್ರಹಸ್ತಂಭವನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ.


ಇದಲ್ಲದೆ ಅಶೇರವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದನು.


ಪಿತೃಗಳಂತೆಯೇ ಅವರೂ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿನ್ನೆಯ ಮೇಲೆಯೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆಯೂ ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಮತ್ತು ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು ಒಡೆದು ಅರೆದು ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆನು.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.


ಜನರು ಮಾಡಿಸಿಕೊಂಡಿದ್ದ ಬಸವನನ್ನು ಅವನು ಹಿಡಿದು ಬೆಂಕಿಯಿಂದ ಸುಟ್ಟು ಅರೆದು ಪುಡಿಪುಡಿಮಾಡಿ ನೀರಿನ ಮೇಲೆ ಚೆಲ್ಲಿ ಇಸ್ರಾಯೇಲ್ಯರಿಗೆ ಆ ನೀರನ್ನು ಕುಡಿಸಿದನು.


ಯೇಸು ಇದನ್ನು ಹೇಳಿದ ಮೇಲೆ ತನ್ನ ಶಿಷ್ಯರ ಸಂಗಡ ಕೆದ್ರೋನ್ ಹಳ್ಳದ ಆಚೆಗೆ ಹೊರಟುಹೋದನು. ಅಲ್ಲಿ ಒಂದು ತೋಟವಿತ್ತು; ಅದರೊಳಕ್ಕೆ ಆತನೂ ಆತನ ಶಿಷ್ಯರೂ ಹೋದರು.


ನೀನು ಇದನ್ನು ಬಿಟ್ಟು ಕಿದ್ರೋನ್‍ಹಳ್ಳದ ಆಚೆಗೆ ಹೋದಿಯಾದರೆ ಅದೇ ದಿವಸದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವದು ಎಂದು ಹೇಳಿದನು.


ಇದಲ್ಲದೆ ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್‍ಹಳ್ಳದಲ್ಲಿ ಹಾಕಿಸಿದನು.


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರಿಗಿ ಸ್ಥಾಪಿಸಿ ಬಾಳ್‍ದೇವತೆಗಳಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು ಹೀಗನ್ನುತ್ತಾನೆ - ಅಯ್ಯೋ, ಅಣ್ಣಾ, ಅಯ್ಯೋ, ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವದಿಲ್ಲ; ಅಯ್ಯೋ, ನಮ್ಮೊಡೆಯಾ, ಅಕಟಾ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.


ಆಗ ಬೂದಿ ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡದು, ಕೆಡವಲ್ಪಡದು.


ಇವನ ತಾಯಿಯಾದ ಮಾಕಳು ಅಶೇರದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿದು ಕಿದ್ರೋನ್‍ಹಳ್ಳದ ಹತ್ತಿರ ಸುಡಿಸಿದನು.


ಅಲ್ಲಿನ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.


ಅರಸನಾದ ಆಸನ ತಾಯಿ ಮಾಕಳು ಅಶೇರದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದದರಿಂದ ಅವನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು