Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:11 - ಕನ್ನಡ ಸತ್ಯವೇದವು J.V. (BSI)

11 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:11
15 ತಿಳಿವುಗಳ ಹೋಲಿಕೆ  

ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ತನ್ನನ್ನು ಮರೆಹೊಕ್ಕವರನ್ನೂ ಇತರ ಸಮಸ್ತ ಜನರನ್ನೂ ಬಾಬೆಲಿಗೆ ಸೆರೆಯೊಯ್ದನು.


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬೆಲಿಗೆ ಸೆರೆಯೊಯ್ದನು. ಪಾರಸಿಯ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಸೆರೆಯಿಂದ ತಿರಿಗಿ ಬಂದ [ಯೆಹೂದ] ಸಂಸ್ಥಾನದವರ ಖಾನೇಷುಮಾರಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬೆಲಿಗೆ ಸೆರೆಯೊಯ್ಯಲ್ಪಟ್ಟವರಲ್ಲಿ


ನಮ್ಮ ಎತ್ತುಗಳು ದೊಡ್ಡ ಹೇರುಗಳನ್ನು ಹೊತ್ತು ಬರುವವು. ವೈರಿಗಳು ಒಳಗೆ ನುಗ್ಗುವದಾಗಲಿ ನಮ್ಮವರನ್ನು ಒಯ್ಯುವದಾಗಲಿ ಇರುವದಿಲ್ಲ; ಬೀದಿಗಳಲ್ಲಿ ಗೋಳಾಟವು ಕೇಳಿಸುವದಿಲ್ಲ.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದರಿದ್ರರಲ್ಲಿ ಅನೇಕರನ್ನೂ ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.


ನೆಬೂಕದ್ನೆಚ್ಚರನ ಆಳಿಕೆಯ ಇಪ್ಪತ್ತು ಮೂರನೆಯ ವರುಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.


ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ ಕತ್ತಿಯ ಬಾಯಿಗೆ ತುತ್ತಾಗುವವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವದು.


ಇದನ್ನೂ ನುಡಿ - ನಾನು ನಿಮಗೆ ಮುಂಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವದು; ಅವರು ವಲಸೆಯಾಗಿ ಸೆರೆಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು