Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:19 - ಕನ್ನಡ ಸತ್ಯವೇದವು J.V. (BSI)

19 ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು ಎಲ್ಲಾ ಹಣ್ಣಿನ ಮರಗಳನ್ನು ಕಡಿದುಹಾಕಿ ಬಾವಿಗಳನ್ನು ಮುಚ್ಚಿಬಿಟ್ಟು ಹೊಲಗಳನ್ನು ಕಲ್ಲು ತುಂಬಿಸಿ ಹಾಳು ಮಾಡುವಿರಿ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಳ್ಳುವಿರಿ. ಎಲ್ಲ ಹಣ್ಣಿನ ಮರಗಳನ್ನು ಕಡಿದುಹಾಕಿ, ಬಾವಿಗಳನ್ನು ಮುಚ್ಚಿಬಿಟ್ಟು, ಹೊಲಗಳನ್ನು ಕಲ್ಲು ತುಂಬಿಸಿ ಹಾಳುಮಾಡುವಿರಿ,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪ್ರತಿಯೊಂದು ಬಲಾಢ್ಯವಾದ ನಗರವನ್ನು ಮತ್ತು ಉತ್ತಮ ನಗರವನ್ನು ನೀವು ಮುತ್ತಿಗೆ ಹಾಕುವಿರಿ. ಪ್ರತಿಯೊಂದು ಒಳ್ಳೆಯ ಮರವನ್ನೂ ನೀವು ಕಡಿದು ಉರುಳಿಸುತ್ತೀರಿ. ಎಲ್ಲಾ ನೀರಿನ ಬುಗ್ಗೆಗಳನ್ನೂ ನೀವು ನಿಲ್ಲಿಸುವಿರಿ. ನೀವು ಕಲ್ಲುಗಳನ್ನೆಸೆದು ಪ್ರತಿಯೊಂದು ಒಳ್ಳೆಯ ತೋಟವನ್ನು ನಾಶಗೊಳಿಸುತ್ತೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ನಾಶಮಾಡಿಬಿಟ್ಟು, ಉತ್ತಮವಾದ ಎಲ್ಲಾ ಮರಗಳನ್ನೂ ಬೀಳಮಾಡಿ, ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಉತ್ತಮವಾದ ಭೂಮಿಯಲ್ಲಿರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ಕೆಡಿಸುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:19
8 ತಿಳಿವುಗಳ ಹೋಲಿಕೆ  

ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ ಎಂದನು. ಅವನು ತೆರೆದನು. ಅನಂತರ - ಬಾಣವನ್ನೆಸೆ ಎಂದು ಆಜ್ಞಾಪಿಸಿದನು. ಅವನು ಎಸೆಯಲು - ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ ಎಂದು ಹೇಳಿದನು.


ಅವರ ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ಕೆಡವಿ ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ ಬಾವಿಗಳನ್ನು ಮುಚ್ಚಿ ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ದುರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.


ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡಿಯಬಹುದೋ ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ - ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು ಎಂದು ಉತ್ತರಕೊಟ್ಟನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಶಿಶುಗಳನ್ನೂ ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ ಅಂದನು.


ಯೆಹೋವನು ಅವನಿಗೆ - ನಾನು ನಿನ್ನ ಸಂಗಡ ಇರುವದರಿಂದ ನೀನು ವಿುದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ ಅಂದನು.


ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.


ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದದರಿಂದ ಅವಳು ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಹುಡುಗನಿಗೆ ಕುಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು